<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಯಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಗಳು, ಆದರ್ಶ ವಿದ್ಯಾಲಯಗಳು, ಪಿ.ಎಂ.ಶ್ರೀ ಶಾಲೆಗಳಿಗೆ ಅಭಿವೃದ್ಧಿಗೆ ನೀಡುತ್ತಿರುವ ಅನುದಾನ ದುರ್ಬಳಕೆ ಆಗುತ್ತಿದೆಯೇ ಎನ್ನುವ ಅನುಮಾನ ಖುದ್ದು ಶಿಕ್ಷಣ ಇಲಾಖೆಯಲ್ಲಿಯೇ ಮೂಡಿದೆ.</p>.<p>ಈ ಅನುಮಾನದ ಹಿನ್ನೆಲೆಯಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಜಿಲ್ಲೆಯ ಎಲ್ಲ ಕರ್ನಾಟಕ ಪಬ್ಲಿಕ್ ಶಾಲೆಗಳು, ಆದರ್ಶ ವಿದ್ಯಾಲಯಗಳು, ಪಿ.ಎಂ.ಶ್ರೀ ಶಾಲೆಗಳಿಗೆ ಭೇಟಿ ನೀಡಿ ಶಾಲಾ ಶೈಕ್ಷಣಿಕ ತಪಾಸಣೆ ಮತ್ತು ಲೆಕ್ಕಪತ್ರಗಳ ತಪಾಸಣೆ ಕೈಗೊಳ್ಳಲು ಜಿಲ್ಲಾ ಶಿಕ್ಷಣ ಇಲಾಖೆ ಮುಂದಾಗಿದೆ.</p>.<p>ಈ ಸಂಬಂಧ ಈ ಶಾಲೆಗಳಿಗೆ ಪತ್ರ ಬರೆಯಲಾಗಿದೆ. 2024–25 ಮತ್ತು 2025–26ನೇ ಸಾಲಿನಲ್ಲಿ ಬಿಡುಗಡೆ ಆಗಿರುವ ಅನುದಾನಗಳ ವೆಚ್ಚಗಳ ಸಂಪೂರ್ಣ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಡಿಡಿಪಿಐ ಹಾಗೂ ಸಮಗ್ರ ಶಿಕ್ಷಣ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಪತ್ರದ ಮೂಲಕ ಈ ಶಾಲೆಗಳಿಗೆ ತಿಳಿಸಿದ್ದಾರೆ.</p>.<p>ಶಾಲೆಗಳ ಮುಖ್ಯ ಶಿಕ್ಷಕರ ನಿರ್ಲಕ್ಷ್ಯ ಮತ್ತ ಬೇಜವಾಬ್ದಾರಿ ತೋರುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>ಕರ್ನಾಟಕ ಪಬ್ಲಿಕ್ ಶಾಲೆಗಳು, ಆದರ್ಶ ವಿದ್ಯಾಲಯಗಳು, ಪಿ.ಎಂ.ಶ್ರೀ ಶಾಲೆಗಳಿಗೆ ಶಾಲಾ ನಿರ್ವಹಣೆ ಮತ್ತು ಇತರೆ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತಿ ವರ್ಷ ಸರ್ಕಾರವು ವಿಶೇಷ ಅನುದಾನ ಬಿಡುಗಡೆ ಮಾಡಿದೆ.</p>.<p>ತಾಲ್ಲೂಕಿನ ಮಂಡಿಕಲ್ಲು ಗ್ರಾಮದ ಕೆಪಿಎಸ್ ಶಾಲೆಗೆ ಇತ್ತೀಚೆಗೆ ಶಿಕ್ಷಣ ಇಲಾಖೆ ಆಯುಕ್ತ ತ್ರಿಲೋಕಚಂದ್ರ ಭೇಟಿ ನೀಡಿದ್ದರು. ಈ ವೇಳೆ ಶಾಲೆಯಲ್ಲಿ ವಿದ್ಯುತ್ ಸಂಪರ್ಕದ ಕೊರತೆ, ಶೌಚಾಲಯಗಳು ಸ್ವಚ್ಛತೆಯಿಂದ ಇಲ್ಲದೇ ಇರುವುದು, ಶಾಲೆಯಲ್ಲಿ ಸ್ವಚ್ಛತೆಗಳು ಇಲ್ಲದಿರುವುದು ಕಂಡು ಬಂದಿತ್ತು. ಆಯುಕ್ತರು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಡಿಡಿಪಿಐ ಶಾಲೆಗಳಲ್ಲಿ ತಪಾಸಣೆಗೆ ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಯಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಗಳು, ಆದರ್ಶ ವಿದ್ಯಾಲಯಗಳು, ಪಿ.ಎಂ.ಶ್ರೀ ಶಾಲೆಗಳಿಗೆ ಅಭಿವೃದ್ಧಿಗೆ ನೀಡುತ್ತಿರುವ ಅನುದಾನ ದುರ್ಬಳಕೆ ಆಗುತ್ತಿದೆಯೇ ಎನ್ನುವ ಅನುಮಾನ ಖುದ್ದು ಶಿಕ್ಷಣ ಇಲಾಖೆಯಲ್ಲಿಯೇ ಮೂಡಿದೆ.</p>.<p>ಈ ಅನುಮಾನದ ಹಿನ್ನೆಲೆಯಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಜಿಲ್ಲೆಯ ಎಲ್ಲ ಕರ್ನಾಟಕ ಪಬ್ಲಿಕ್ ಶಾಲೆಗಳು, ಆದರ್ಶ ವಿದ್ಯಾಲಯಗಳು, ಪಿ.ಎಂ.ಶ್ರೀ ಶಾಲೆಗಳಿಗೆ ಭೇಟಿ ನೀಡಿ ಶಾಲಾ ಶೈಕ್ಷಣಿಕ ತಪಾಸಣೆ ಮತ್ತು ಲೆಕ್ಕಪತ್ರಗಳ ತಪಾಸಣೆ ಕೈಗೊಳ್ಳಲು ಜಿಲ್ಲಾ ಶಿಕ್ಷಣ ಇಲಾಖೆ ಮುಂದಾಗಿದೆ.</p>.<p>ಈ ಸಂಬಂಧ ಈ ಶಾಲೆಗಳಿಗೆ ಪತ್ರ ಬರೆಯಲಾಗಿದೆ. 2024–25 ಮತ್ತು 2025–26ನೇ ಸಾಲಿನಲ್ಲಿ ಬಿಡುಗಡೆ ಆಗಿರುವ ಅನುದಾನಗಳ ವೆಚ್ಚಗಳ ಸಂಪೂರ್ಣ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಡಿಡಿಪಿಐ ಹಾಗೂ ಸಮಗ್ರ ಶಿಕ್ಷಣ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಪತ್ರದ ಮೂಲಕ ಈ ಶಾಲೆಗಳಿಗೆ ತಿಳಿಸಿದ್ದಾರೆ.</p>.<p>ಶಾಲೆಗಳ ಮುಖ್ಯ ಶಿಕ್ಷಕರ ನಿರ್ಲಕ್ಷ್ಯ ಮತ್ತ ಬೇಜವಾಬ್ದಾರಿ ತೋರುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>ಕರ್ನಾಟಕ ಪಬ್ಲಿಕ್ ಶಾಲೆಗಳು, ಆದರ್ಶ ವಿದ್ಯಾಲಯಗಳು, ಪಿ.ಎಂ.ಶ್ರೀ ಶಾಲೆಗಳಿಗೆ ಶಾಲಾ ನಿರ್ವಹಣೆ ಮತ್ತು ಇತರೆ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತಿ ವರ್ಷ ಸರ್ಕಾರವು ವಿಶೇಷ ಅನುದಾನ ಬಿಡುಗಡೆ ಮಾಡಿದೆ.</p>.<p>ತಾಲ್ಲೂಕಿನ ಮಂಡಿಕಲ್ಲು ಗ್ರಾಮದ ಕೆಪಿಎಸ್ ಶಾಲೆಗೆ ಇತ್ತೀಚೆಗೆ ಶಿಕ್ಷಣ ಇಲಾಖೆ ಆಯುಕ್ತ ತ್ರಿಲೋಕಚಂದ್ರ ಭೇಟಿ ನೀಡಿದ್ದರು. ಈ ವೇಳೆ ಶಾಲೆಯಲ್ಲಿ ವಿದ್ಯುತ್ ಸಂಪರ್ಕದ ಕೊರತೆ, ಶೌಚಾಲಯಗಳು ಸ್ವಚ್ಛತೆಯಿಂದ ಇಲ್ಲದೇ ಇರುವುದು, ಶಾಲೆಯಲ್ಲಿ ಸ್ವಚ್ಛತೆಗಳು ಇಲ್ಲದಿರುವುದು ಕಂಡು ಬಂದಿತ್ತು. ಆಯುಕ್ತರು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಡಿಡಿಪಿಐ ಶಾಲೆಗಳಲ್ಲಿ ತಪಾಸಣೆಗೆ ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>