ಪ್ರೇಮಾವತಿಗೆ ರಾಜ್ಯ ಪ್ರಶಸ್ತಿ
ಚಿಕ್ಕಬಳ್ಳಾಪುರ ತಾಲ್ಲೂಕು ನಂದಿ ಕ್ಲಸ್ಟರ್ನ ಈರೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಪ್ರೇಮಾವತಿ ಎನ್. ಅವರು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. 28 ವರ್ಷಗಳಿಂದ ಅವರು ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರೇಮಾವತಿ ಅವರು ಕೆಲಸ ನಿರ್ವಹಿಸಿದ ಶಾಲೆಗಳಲ್ಲಿ ಎಸ್ಡಿಎಂಸಿ ಸಮುದಾಯ ಸಹಶಿಕ್ಷಕರು ಸೇರಿದಂತೆ ಎಲ್ಲರ ಸಹಕಾರದಲ್ಲಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ವಿದ್ಯಾರ್ಥಿಗಳಿಗೆ ವಿವಿಧ ನಾವೀನ್ಯ ರೀತಿಯ ಬೋಧನಾ ತಂತ್ರಗಳನ್ನು ಹಾಗೂ ತಾಂತ್ರಿಕ ಉಪಕರಣಗಳನ್ನು ಬಳಸಿಕೊಂಡು ಕಲಿಸಿದ್ದಾರೆ. ಶಾಲೆಯ ಪರಿಸರ ಆಕರ್ಷಕಗೊಳಿಸಲು ಶ್ರಮಿಸಿದ್ದಾರೆ. ಹೀಗೆ ತಾವು ಕೆಲಸ ನಿರ್ವಹಿಸಿದ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಈ ಎಲ್ಲವನ್ನು ಪರಿಗಣಿಸಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಲಾಗಿದೆ.