<p><strong>ಚಿಕ್ಕಬಳ್ಳಾಪುರ:</strong> ತಂದೆ, ತಾಯಿ ಸೇರಿದಂತೆ ಎಲ್ಲ ಹಿರಿಯ ನಾಗರಿಕರಿಗೆ ಪ್ರೀತಿ, ಗೌರವ, ಕಾಳಜಿ ತೋರಿ ಸೇವೆ ಸಲ್ಲಿಸುವುದು ನಮ್ಮ ಕರ್ತವ್ಯ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ತಿಳಿಸಿದರು.</p>.<p>ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>ಪ್ರತಿಯೊಬ್ಬರ ಜೀವನದಲ್ಲಿ ಬಾಲ್ಯ, ಯೌವ್ವನ ಹಾಗೂ ಮುಪ್ಪು ಸಹಜ. ಹಿರಿಯ ನಾಗರಿಕರನ್ನು ಪ್ರತಿಯೊಬ್ಬರು ಗೌರವದಿಂದ ಕಾಣಬೇಕು. ವಿವಿಧ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗೆ ದೊರೆಯಬೇಕಾದ ಸೌಲಭ್ಯಗಳು ತಲುಪುವ ನಿಟ್ಟಿನಲ್ಲಿ ಸಹಕಾರ ನೀಡಬೇಕು ಎಂದು ಹೇಳಿದರು. </p>.<p>ಕಣ್ಣಿಗೆ ಕಾಣುವ ದೇವರು ಎಂದರೆ ಜನ್ಮ ನೀಡಿದ ತಂದೆ ತಾಯಿ. ಜನ್ಮದಾತರಿಗೆ ಸೇವೆ ಸಲ್ಲಿಸಿದರೆ ದೇವರ ಸೇವೆ ಮಾಡಿದಷ್ಟು ಪುಣ್ಯ ಲಭಿಸಲಿದೆ. ವರ್ಷಗಳು ಉರುಳಿದಂತೆ ದೇಹಕ್ಕೆ ವಯಸ್ಸು ಆಗುವುದು ಸಹಜ ಎಂದು ಹೇಳಿದರು.</p>.<p>ಹಿರಿಯ ನಾಗರಿಕರಾದ ತಂದೆ-ತಾಯಿ, ಅಜ್ಜ-ಅಜ್ಜಿ ಮಾತ್ರವಲ್ಲದೆ, ಪ್ರತಿ ಮನೆಯ ಹಿರಿಯರು ಮಾರ್ಗದರ್ಶಕರಾಗಿರುತ್ತಾರೆ. ಅವರು ಹೇಳುವ ಸಲಹೆಗಳು, ನಮ್ಮನ್ನು ಸರಿಯಾದ ದಾರಿಯಲ್ಲಿ ನಡೆಯಲು ನೆರವಾಗುತ್ತವೆ. ಒಟ್ಟಾರೆ ಹಿರಿಯರನ್ನು ಗೌರವದಿಂದ ನೋಡಿಕೊಳ್ಳುವುದು ನಮ್ಮ ಹೊಣೆಗಾರಿಕೆ ಎಂದು ತಿಳಿಸಿದರು.</p>.<p> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ದಿನಗಳು ಉರುಳಿದಂತೆ ದೇಹಕ್ಕೆ ವಯಸ್ಸು ಆಗುತ್ತದೆ. ವಾಲ್ಯ ಯೌವ್ವನ, ಮುಪ್ಪು ಹಾಗೂ ಕೊನೆಗೆ ಸಾವು. ಇವು ಜೀವಿತದಲ್ಲಿ ಸಂಭವಿಸುವ ಸಹಜ ಪ್ರಕ್ರಿಯೆಗಳು ಎಂದರು.</p>.<p>ಯುವಜನರು ಸಂಪಾದನೆಯ ಬೇಟೆಗೆ ಬಿದ್ದು ಊರು ತೊರೆದು ನಗರಗಳಿಗೆ ವಲಸೆ ಹೋಗಿ ವೃದ್ಧರನ್ನು ಅನಾಥಾಶ್ರಮಗಳಿಗೆ ಸೇರಿಸುವುದು ಹೆಚ್ಚುತ್ತಿದೆ. ಇದರಿಂದ ವೃದ್ಧರ ಗೋಳು ಹೇಳತೀರದು. ನಮ್ಮ ಬದುಕಿಗೆ ದಾರಿ ಮಾಡಿಕೊಟ್ಟ ಹಿರಿಯರ ಕೊನೆಗಾಲದ ಬದುಕನ್ನು ಹಸನುಗೊಳಿಸುವುದು ಪ್ರತಿಯೊಬ್ಬ ಯುವಜನರ ಆದ್ಯ ಕರ್ತವ್ಯ ಎಂದರು.</p>.<p>ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಜ್ಯೋತಿ ಲಕ್ಷ್ಮಿ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಮುನಿರಾಜು, ಜಿಲ್ಲಾ ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ತಿರುಮಲಪ್ಪ, ಕಾರ್ಯದರ್ಶಿ ಜಯರಾಮ್ ರೆಡ್ಡಿ, ಶಿಡ್ಲಘಟ್ಟ ಆಶಾಕಿರಣ ಅಂಗವಿಕಲ ಶಾಲೆ ಅಧ್ಯಕ್ಷ ಗೋಪಾಲ್ ಮತ್ತಿತರರು ಪಾಲ್ಗೊಂಡಿದ್ದರು.</p>.<p><strong>ದೌರ್ಜನ್ಯ;</strong> 1090 ಸಹಾಯವಾಣಿ ಹಿರಿಯ ನಾಗರಿಕರಿಗೆ ಅವರ ಕುಟುಂಬದ ಸದಸ್ಯರು ಅಥವಾ ಇತರರು ದೌರ್ಜನ್ಯ ಅಥವಾ ಅನ್ಯಾಯ ಮಾಡಿದರೆ ಉಚಿತ ಸಹಾಯವಾಣಿ 1090 ಮೂಲಕ ಸಕ್ಷಮ ಪ್ರಾಧಿಕಾರದ ನೆರವು ಪಡೆಯಬೇಕು ಎಂದು ವೆಂಕಟೇಶರೆಡ್ಡಿ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ತಂದೆ, ತಾಯಿ ಸೇರಿದಂತೆ ಎಲ್ಲ ಹಿರಿಯ ನಾಗರಿಕರಿಗೆ ಪ್ರೀತಿ, ಗೌರವ, ಕಾಳಜಿ ತೋರಿ ಸೇವೆ ಸಲ್ಲಿಸುವುದು ನಮ್ಮ ಕರ್ತವ್ಯ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ತಿಳಿಸಿದರು.</p>.<p>ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>ಪ್ರತಿಯೊಬ್ಬರ ಜೀವನದಲ್ಲಿ ಬಾಲ್ಯ, ಯೌವ್ವನ ಹಾಗೂ ಮುಪ್ಪು ಸಹಜ. ಹಿರಿಯ ನಾಗರಿಕರನ್ನು ಪ್ರತಿಯೊಬ್ಬರು ಗೌರವದಿಂದ ಕಾಣಬೇಕು. ವಿವಿಧ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗೆ ದೊರೆಯಬೇಕಾದ ಸೌಲಭ್ಯಗಳು ತಲುಪುವ ನಿಟ್ಟಿನಲ್ಲಿ ಸಹಕಾರ ನೀಡಬೇಕು ಎಂದು ಹೇಳಿದರು. </p>.<p>ಕಣ್ಣಿಗೆ ಕಾಣುವ ದೇವರು ಎಂದರೆ ಜನ್ಮ ನೀಡಿದ ತಂದೆ ತಾಯಿ. ಜನ್ಮದಾತರಿಗೆ ಸೇವೆ ಸಲ್ಲಿಸಿದರೆ ದೇವರ ಸೇವೆ ಮಾಡಿದಷ್ಟು ಪುಣ್ಯ ಲಭಿಸಲಿದೆ. ವರ್ಷಗಳು ಉರುಳಿದಂತೆ ದೇಹಕ್ಕೆ ವಯಸ್ಸು ಆಗುವುದು ಸಹಜ ಎಂದು ಹೇಳಿದರು.</p>.<p>ಹಿರಿಯ ನಾಗರಿಕರಾದ ತಂದೆ-ತಾಯಿ, ಅಜ್ಜ-ಅಜ್ಜಿ ಮಾತ್ರವಲ್ಲದೆ, ಪ್ರತಿ ಮನೆಯ ಹಿರಿಯರು ಮಾರ್ಗದರ್ಶಕರಾಗಿರುತ್ತಾರೆ. ಅವರು ಹೇಳುವ ಸಲಹೆಗಳು, ನಮ್ಮನ್ನು ಸರಿಯಾದ ದಾರಿಯಲ್ಲಿ ನಡೆಯಲು ನೆರವಾಗುತ್ತವೆ. ಒಟ್ಟಾರೆ ಹಿರಿಯರನ್ನು ಗೌರವದಿಂದ ನೋಡಿಕೊಳ್ಳುವುದು ನಮ್ಮ ಹೊಣೆಗಾರಿಕೆ ಎಂದು ತಿಳಿಸಿದರು.</p>.<p> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ದಿನಗಳು ಉರುಳಿದಂತೆ ದೇಹಕ್ಕೆ ವಯಸ್ಸು ಆಗುತ್ತದೆ. ವಾಲ್ಯ ಯೌವ್ವನ, ಮುಪ್ಪು ಹಾಗೂ ಕೊನೆಗೆ ಸಾವು. ಇವು ಜೀವಿತದಲ್ಲಿ ಸಂಭವಿಸುವ ಸಹಜ ಪ್ರಕ್ರಿಯೆಗಳು ಎಂದರು.</p>.<p>ಯುವಜನರು ಸಂಪಾದನೆಯ ಬೇಟೆಗೆ ಬಿದ್ದು ಊರು ತೊರೆದು ನಗರಗಳಿಗೆ ವಲಸೆ ಹೋಗಿ ವೃದ್ಧರನ್ನು ಅನಾಥಾಶ್ರಮಗಳಿಗೆ ಸೇರಿಸುವುದು ಹೆಚ್ಚುತ್ತಿದೆ. ಇದರಿಂದ ವೃದ್ಧರ ಗೋಳು ಹೇಳತೀರದು. ನಮ್ಮ ಬದುಕಿಗೆ ದಾರಿ ಮಾಡಿಕೊಟ್ಟ ಹಿರಿಯರ ಕೊನೆಗಾಲದ ಬದುಕನ್ನು ಹಸನುಗೊಳಿಸುವುದು ಪ್ರತಿಯೊಬ್ಬ ಯುವಜನರ ಆದ್ಯ ಕರ್ತವ್ಯ ಎಂದರು.</p>.<p>ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಜ್ಯೋತಿ ಲಕ್ಷ್ಮಿ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಮುನಿರಾಜು, ಜಿಲ್ಲಾ ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ತಿರುಮಲಪ್ಪ, ಕಾರ್ಯದರ್ಶಿ ಜಯರಾಮ್ ರೆಡ್ಡಿ, ಶಿಡ್ಲಘಟ್ಟ ಆಶಾಕಿರಣ ಅಂಗವಿಕಲ ಶಾಲೆ ಅಧ್ಯಕ್ಷ ಗೋಪಾಲ್ ಮತ್ತಿತರರು ಪಾಲ್ಗೊಂಡಿದ್ದರು.</p>.<p><strong>ದೌರ್ಜನ್ಯ;</strong> 1090 ಸಹಾಯವಾಣಿ ಹಿರಿಯ ನಾಗರಿಕರಿಗೆ ಅವರ ಕುಟುಂಬದ ಸದಸ್ಯರು ಅಥವಾ ಇತರರು ದೌರ್ಜನ್ಯ ಅಥವಾ ಅನ್ಯಾಯ ಮಾಡಿದರೆ ಉಚಿತ ಸಹಾಯವಾಣಿ 1090 ಮೂಲಕ ಸಕ್ಷಮ ಪ್ರಾಧಿಕಾರದ ನೆರವು ಪಡೆಯಬೇಕು ಎಂದು ವೆಂಕಟೇಶರೆಡ್ಡಿ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>