ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗೇಪಲ್ಲಿ: ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷರ ಆಯ್ಕೆ

Last Updated 29 ಮೇ 2022, 4:39 IST
ಅಕ್ಷರ ಗಾತ್ರ

ಬಾಗೇಪಲ್ಲಿ: ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮಾಭಿವೃದ್ಧಿ ಬ್ಯಾಂಕ್ಅಧ್ಯಕ್ಷರಾಗಿ ವಿ. ಪ್ರಭಾಕರ ರೆಡ್ಡಿ ಮತ್ತು ಉಪಾಧ್ಯಕ್ಷೆಯಾಗಿ ಕೆ.ಸಿ. ಲಕ್ಷ್ಮಿದೇವಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬ್ಯಾಂಕ್‌ ಆವರಣದಲ್ಲಿ ಶನಿವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಇಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹಾಗಾಗಿ,ಚುನಾವಣಾಧಿಕಾರಿ ಎಂ. ಪ್ರೇಮ್‍ಕುಮಾರ್ ಅವರು ಅವಿರೋಧ ಆಯ್ಕೆಯನ್ನು
ಘೋಷಿಸಿದರು.

ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷೆಯನ್ನು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ, ಪುರಸಭಾ ಉಪಾಧ್ಯಕ್ಷ ಎ. ಶ್ರೀನಿವಾಸ್, ಸದಸ್ಯ ಅಶೋಕ್ ರೆಡ್ಡಿ, ಯುವ ಮುಖಂಡ ಅಮರನಾಥರೆಡ್ಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಅಭಿಮಾನಿಗಳು ಅಭಿನಂದಿಸಿದರು.

ಅಧ್ಯಕ್ಷ ಪ್ರಭಾಕರ ರೆಡ್ಡಿ ಮಾತನಾಡಿ, ರೈತರ ಕಲ್ಯಾಣ ಕಾರ್ಯಕ್ರಮಗಳು ಹಾಗೂ ಬ್ಯಾಂಕ್‌ನ ವಹಿವಾಟು ಹೆಚ್ಚಿಸಲು ಕ್ರಮವಹಿಸಲಾಗುವುದು. ಅರ್ಹ ರೈತ ಫಲಾನುಭವಿಗಳಿಗೆ ಸರ್ಕಾರದ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗುವುದು. ಬಾಕಿ ಇರುವ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಬ್ಯಾಂಕ್‌ನ ಪ್ರಭಾರ ವ್ಯವಸ್ಥಾಪಕ ಕೆ.ಪಿ. ಶಶಿಧರ್, ಗಣಕಯಂತ್ರ ಅಧಿಕಾರಿ ಧರ್ಮಿಣಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT