ಅಭ್ಯರ್ಥಿ ಡಿ.ಆರ್. ನಾರಾಯಣಸ್ವಾಮಿ ಮಾತನಾಡಿ, ‘ನಮಗೆ ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದಿವೆ. ಆದರೆ ಇಂದಿಗೂ ಹಳ್ಳಿ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರು, ಮನೆ ಸೇರಿದಂತೆ ಮೂಲಸೌಕರ್ಯಗಳಿಂದ ಜನ ವಂಚಿತರಾಗಿದ್ದಾರೆ. ಇಷ್ಟು ವರ್ಷ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳನ್ನು ನಂಬಿ ಮೋಸ ಹೋಗಿದ್ದು ಸಾಕು, ಬಿಎಸ್ಪಿಗೂ ಒಮ್ಮೆ ಅವಕಾಶ ನೀಡಿ’ ಎಂದು ಮನವಿ ಮಾಡಿದರು.