<p><strong>ಚಿಂತಾಮಣಿ: </strong>ತಾಲ್ಲೂಕಿನ ಕುರುಬೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಮುಂದಿನ 5 ವರ್ಷಗಳ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಗರು ಜಯಭೇರಿ ಬಾರಿಸಿದ್ದಾರೆ.</p>.<p>ಜೆಡಿಎಸ್ ಶಾಸಕ ಕೃಷ್ಣಾರೆಡ್ಡಿ ಬೆಂಬಲಿಗರು ಮತ್ತು ಮಾಜಿ ಶಾಸಕ ಡಾ.ಎಂ.ಸಿ. ಸುಧಾಕರ್ ಬೆಂಬಲಿಗರ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಎರಡು ಗುಂಪುಗಳು ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಮನೆ ಮನೆಗೂ ತೆರಳಿ ಮತಯಾಚನೆ ಮಾಡಿದ್ದರು.</p>.<p>ಮತದಾನ ಶಾಂತಿಯುತವಾಗಿ ನಡೆಯಿತು. ಮತದಾರರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಮತದಾನದ ನಂತರ ರಾತ್ರಿಯೇ ಮತಗಳ ಎಣಿಕೆ ನಡೆದು ಚುನಾವಣಾಧಿಕಾರಿ ಎಸ್. ಪ್ರದೀಪ್ ಫಲಿತಾಂಶ ಘೋಷಣೆ ಮಾಡಿದರು. ಒಟ್ಟು 12 ನಿರ್ದೇಶಕ ಸ್ಥಾನಗಳಲ್ಲಿ 10 ಜೆಡಿಎಸ್ ಬೆಂಬಲಿಗರು, 2 ಸ್ಥಾನಗಳು ಮಾಜಿ ಶಾಸಕರ ಗುಂಪಿನ ಪಾಲಾಗಿವೆ.</p>.<p>ಜಯಗಳಿಸಿದವರು: ನೇತಾಜಿಗೌಡ, ಎಂ. ಶಿವಾರೆಡ್ಡಿ, ಶ್ರೀನಿವಾಸಗೌಡ, ವಿಶ್ವನಾಥರೆಡ್ಡಿ, ಮುನಿವೆಂಕಟಪ್ಪ, ಕೆ.ಎಂ. ನಟರಾಜ್, ಗಂಗಮ್ಮ, ಚಂದ್ರಕಲಾ, ಎ.ಜಿ. ಕೃಷ್ಣಪ್ಪ, ಕೆ.ಎಂ. ಕೃಷ್ಣಪ್ಪ, ಕೆ.ಎಂ. ಮಂಜುನಾಥ, ಎಂ. ವೆಂಕಟರೆಡ್ಡಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ: </strong>ತಾಲ್ಲೂಕಿನ ಕುರುಬೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಮುಂದಿನ 5 ವರ್ಷಗಳ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಗರು ಜಯಭೇರಿ ಬಾರಿಸಿದ್ದಾರೆ.</p>.<p>ಜೆಡಿಎಸ್ ಶಾಸಕ ಕೃಷ್ಣಾರೆಡ್ಡಿ ಬೆಂಬಲಿಗರು ಮತ್ತು ಮಾಜಿ ಶಾಸಕ ಡಾ.ಎಂ.ಸಿ. ಸುಧಾಕರ್ ಬೆಂಬಲಿಗರ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಎರಡು ಗುಂಪುಗಳು ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಮನೆ ಮನೆಗೂ ತೆರಳಿ ಮತಯಾಚನೆ ಮಾಡಿದ್ದರು.</p>.<p>ಮತದಾನ ಶಾಂತಿಯುತವಾಗಿ ನಡೆಯಿತು. ಮತದಾರರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಮತದಾನದ ನಂತರ ರಾತ್ರಿಯೇ ಮತಗಳ ಎಣಿಕೆ ನಡೆದು ಚುನಾವಣಾಧಿಕಾರಿ ಎಸ್. ಪ್ರದೀಪ್ ಫಲಿತಾಂಶ ಘೋಷಣೆ ಮಾಡಿದರು. ಒಟ್ಟು 12 ನಿರ್ದೇಶಕ ಸ್ಥಾನಗಳಲ್ಲಿ 10 ಜೆಡಿಎಸ್ ಬೆಂಬಲಿಗರು, 2 ಸ್ಥಾನಗಳು ಮಾಜಿ ಶಾಸಕರ ಗುಂಪಿನ ಪಾಲಾಗಿವೆ.</p>.<p>ಜಯಗಳಿಸಿದವರು: ನೇತಾಜಿಗೌಡ, ಎಂ. ಶಿವಾರೆಡ್ಡಿ, ಶ್ರೀನಿವಾಸಗೌಡ, ವಿಶ್ವನಾಥರೆಡ್ಡಿ, ಮುನಿವೆಂಕಟಪ್ಪ, ಕೆ.ಎಂ. ನಟರಾಜ್, ಗಂಗಮ್ಮ, ಚಂದ್ರಕಲಾ, ಎ.ಜಿ. ಕೃಷ್ಣಪ್ಪ, ಕೆ.ಎಂ. ಕೃಷ್ಣಪ್ಪ, ಕೆ.ಎಂ. ಮಂಜುನಾಥ, ಎಂ. ವೆಂಕಟರೆಡ್ಡಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>