ರಾಜ್ಯ ಚುನಾವಣಾ ಆಯೋಗ ನಗರಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಿಸುತ್ತಿದ್ದಂತೆ ನಗರದಲ್ಲಿ ಸಂಚಲನ ಮೂಡಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಚುನಾವಣೆಗಾಗಿ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ತೊಡಗಿಸಿಕೊಂಡಿದ್ದು, ಆಕಾಂಕ್ಷಿಗಳ ದಂಡು ನಾಯಕರ ಮನೆಗೆ ಅಲೆದಾಟ ಶುರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.