<p><strong>ಚಿಕ್ಕಬಳ್ಳಾಪುರ: </strong>ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಜಿಲ್ಲೆಯಲ್ಲಿ ಎಲೆಕ್ಟ್ರಿಕ್ ವಾಹನ ತಯಾರಿಕೆ, ಲಿಥಿಯಂ ಬ್ಯಾಟರಿ ಉತ್ಪಾದನಾ ಘಟಕ ಆರಂಭಿಸುವ ಪ್ರಸ್ತಾವಕ್ಕೆ ಅನುಮೋದನೆ ದೊರೆತಿದೆ.</p>.<p>ಸಮಿತಿಯು ಒಟ್ಟು ₹26,659 ಕೋಟಿ ಹೂಡಿಕೆಯ ಐದು ಪ್ರಸ್ತಾವನೆ ಗಳಿಗೆ ಅನುಮತಿ ನೀಡಿದ್ದು ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿ ನಿರೀಕ್ಷಿಸಲಾಗಿದೆ. ಈ ಪೈಕಿ ಚಿಕ್ಕಬಳ್ಳಾಪುರದಲ್ಲಿ ಹ್ಯುನೆಟ್ ಕಂಪನಿ ಎಲೆಕ್ಟ್ರಿಕ್ ವಾಹನ ತಯಾರಿಕೆ, ಲಿಥಿಯಂ ಬ್ಯಾಟರಿ ಉತ್ಪಾದನಾ ಘಟಕ ಆರಂಭಕ್ಕೆ ₹1,825 ಕೋಟಿ ಹೂಡಿಕೆಗೆ ಮುಂದೆ ಬಂದಿದ್ದು, ಇದರಿಂದ 2,210 ಉದ್ಯೋಗ ಸೃಷ್ಟಿ ನಿರೀಕ್ಷೆ ಹೊಂದಲಾಗಿದೆ.</p>.<p>ರಾಜ್ಯ ರಾಜಧಾನಿಗೆ ಸಮೀಪ ದಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಾಗಿ ದಶಕ ಪೂರೈಸಿದರೂ ಈವರೆಗೆ ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದ ಕೈಗಾರಿಕೆ ಗಳು ತಲೆ ಎತ್ತದೆ ಇರುವುದು ಜನರಲ್ಲಿ ಬೇಸರ ಮೂಡಿಸಿರುವಾಗಲೇ ಈ ಹೊಸ ಪ್ರಸ್ತಾವಕ್ಕೆ ದೊರೆತಿರುವ ಅನುಮೋದನೆ ಸಹಜವಾಗಿಯೇ ಕೈಗಾರಿಕೆ ವಲಯದಲ್ಲಿ ಸಂಚಲನ ಮೂಡಿಸಿದೆ.</p>.<p>ಕೃಷಿ ಉತ್ಪನ್ನ ಆಧಾರಿತ ಕೈಗಾರಿಕೆ ಸ್ಥಾಪನೆ ಈ ಭಾಗದ ಬಹುಸಂಖ್ಯಾತ ಜನರ ಪ್ರಮುಖ ಬೇಡಿಕೆ. ದ್ರಾಕ್ಷಿ, ಟೊಮೆಟೊ ಸೇರಿದಂತೆ ವಿವಿಧ ತರಕಾರಿಗಳು ಬೆಲೆ ಕಳೆದುಕೊಂಡಾಗ ಸ್ಥಳೀಯವಾಗಿ ಅವುಗಳನ್ನು ಸಂಸ್ಕರಿಸಿ, ಮೌಲ್ಯವರ್ಧನೆ ಮಾಡಬಹುದು. ಜತೆಗೆ ಉದ್ಯೋಗ ಸೃಷ್ಟಿಸಬಹುದು ಎನ್ನುವುದು ಹಣ್ಣು, ತರಕಾರಿ ಬೆಳೆಗಾರರ ಪ್ರತಿಪಾದನೆ. ಆದರೆ ಆ ಕನಸು ಇಂದಿಗೂ ನನಸಾಗದೆ ಬೆಳೆಗಾರರಲ್ಲಿ ಬೇಗುದಿ ಬೆಂಕಿ ಮುಚ್ಚಿದ ಕೆಂಡಂತಿದೆ.</p>.<p>ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸದ ಸರ್ಕಾರಗಳು ಇನ್ನೊಂದೆಡೆ ಬೇಡದ ವಿವಿಧ ಘಟಕಗಳನ್ನು ಜಿಲ್ಲೆಗೆ ಘೋಷಿಸುವ ಮೂಲಕ ಈ ಭಾಗದ ಜನರಿಗೆ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತ ಬರುತ್ತಿವೆ ಎನ್ನುವುದು ಜಿಲ್ಲೆಯ ಪ್ರಜ್ಞಾವಂತರ ಬೇಸರ.</p>.<p>ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಜಿಲ್ಲೆಯಲ್ಲಿ ಮೊಬೈಲ್ ಫೋನ್ಗಳ ಬಿಡಿಭಾಗಗಳ ಘಟಕ ಸ್ಥಾಪಿಸಲಾಗುತ್ತದೆ ಎಂದು ಘೋಷಿಸಿದ್ದರು. ಅದಾಗಿ ಎರಡು ವರ್ಷಗಳೇ ಕಳೆದರೂ ಈವರೆಗೆ ಆ ಘಟಕ ಸ್ಥಾಪನೆಯ ಸಣ್ಣ ಕುರುಹು ಸಹ ಜಿಲ್ಲೆಯಲ್ಲಿ ಕಾಣಿಸಿಕೊಂಡಿಲ್ಲ. ಒಂದೇ ಒಂದು ಉದ್ಯೋಗ ಸಹ ಸೃಷ್ಟಿಯಾಗಿಲ್ಲ.</p>.<p>ಪರಿಸ್ಥಿತಿ ಹೀಗಿರುವಾಗಲೇ, ‘ರಾಜ್ಯ ಸರ್ಕಾರ ಇದೀಗ ಜಿಲ್ಲೆಯಲ್ಲಿ ಎಲೆಕ್ಟ್ರಿಕ್ ವಾಹನ ತಯಾರಿಕೆ, ಲಿಥಿಯಂ ಬ್ಯಾಟರಿ ಉತ್ಪಾದನಾ ಘಟಕ ಆರಂಭಕ್ಕೆ ಅನುಮೋದನೆ ನೀಡಿರುವುದು ಕಣ್ಣೊರೆಸುವ ತಂತ್ರವಾಗಿದೆ. ಇವು ಘೋಷಣೆಗಳಿಗಷ್ಟೇ ಸೀಮಿತ’ ಎನ್ನುವುದು ಸಾರ್ವಜನಿಕ ವಲಯದ ವಿಶ್ಲೇಷಣೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಜಿಲ್ಲೆಯಲ್ಲಿ ಎಲೆಕ್ಟ್ರಿಕ್ ವಾಹನ ತಯಾರಿಕೆ, ಲಿಥಿಯಂ ಬ್ಯಾಟರಿ ಉತ್ಪಾದನಾ ಘಟಕ ಆರಂಭಿಸುವ ಪ್ರಸ್ತಾವಕ್ಕೆ ಅನುಮೋದನೆ ದೊರೆತಿದೆ.</p>.<p>ಸಮಿತಿಯು ಒಟ್ಟು ₹26,659 ಕೋಟಿ ಹೂಡಿಕೆಯ ಐದು ಪ್ರಸ್ತಾವನೆ ಗಳಿಗೆ ಅನುಮತಿ ನೀಡಿದ್ದು ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿ ನಿರೀಕ್ಷಿಸಲಾಗಿದೆ. ಈ ಪೈಕಿ ಚಿಕ್ಕಬಳ್ಳಾಪುರದಲ್ಲಿ ಹ್ಯುನೆಟ್ ಕಂಪನಿ ಎಲೆಕ್ಟ್ರಿಕ್ ವಾಹನ ತಯಾರಿಕೆ, ಲಿಥಿಯಂ ಬ್ಯಾಟರಿ ಉತ್ಪಾದನಾ ಘಟಕ ಆರಂಭಕ್ಕೆ ₹1,825 ಕೋಟಿ ಹೂಡಿಕೆಗೆ ಮುಂದೆ ಬಂದಿದ್ದು, ಇದರಿಂದ 2,210 ಉದ್ಯೋಗ ಸೃಷ್ಟಿ ನಿರೀಕ್ಷೆ ಹೊಂದಲಾಗಿದೆ.</p>.<p>ರಾಜ್ಯ ರಾಜಧಾನಿಗೆ ಸಮೀಪ ದಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಾಗಿ ದಶಕ ಪೂರೈಸಿದರೂ ಈವರೆಗೆ ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದ ಕೈಗಾರಿಕೆ ಗಳು ತಲೆ ಎತ್ತದೆ ಇರುವುದು ಜನರಲ್ಲಿ ಬೇಸರ ಮೂಡಿಸಿರುವಾಗಲೇ ಈ ಹೊಸ ಪ್ರಸ್ತಾವಕ್ಕೆ ದೊರೆತಿರುವ ಅನುಮೋದನೆ ಸಹಜವಾಗಿಯೇ ಕೈಗಾರಿಕೆ ವಲಯದಲ್ಲಿ ಸಂಚಲನ ಮೂಡಿಸಿದೆ.</p>.<p>ಕೃಷಿ ಉತ್ಪನ್ನ ಆಧಾರಿತ ಕೈಗಾರಿಕೆ ಸ್ಥಾಪನೆ ಈ ಭಾಗದ ಬಹುಸಂಖ್ಯಾತ ಜನರ ಪ್ರಮುಖ ಬೇಡಿಕೆ. ದ್ರಾಕ್ಷಿ, ಟೊಮೆಟೊ ಸೇರಿದಂತೆ ವಿವಿಧ ತರಕಾರಿಗಳು ಬೆಲೆ ಕಳೆದುಕೊಂಡಾಗ ಸ್ಥಳೀಯವಾಗಿ ಅವುಗಳನ್ನು ಸಂಸ್ಕರಿಸಿ, ಮೌಲ್ಯವರ್ಧನೆ ಮಾಡಬಹುದು. ಜತೆಗೆ ಉದ್ಯೋಗ ಸೃಷ್ಟಿಸಬಹುದು ಎನ್ನುವುದು ಹಣ್ಣು, ತರಕಾರಿ ಬೆಳೆಗಾರರ ಪ್ರತಿಪಾದನೆ. ಆದರೆ ಆ ಕನಸು ಇಂದಿಗೂ ನನಸಾಗದೆ ಬೆಳೆಗಾರರಲ್ಲಿ ಬೇಗುದಿ ಬೆಂಕಿ ಮುಚ್ಚಿದ ಕೆಂಡಂತಿದೆ.</p>.<p>ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸದ ಸರ್ಕಾರಗಳು ಇನ್ನೊಂದೆಡೆ ಬೇಡದ ವಿವಿಧ ಘಟಕಗಳನ್ನು ಜಿಲ್ಲೆಗೆ ಘೋಷಿಸುವ ಮೂಲಕ ಈ ಭಾಗದ ಜನರಿಗೆ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತ ಬರುತ್ತಿವೆ ಎನ್ನುವುದು ಜಿಲ್ಲೆಯ ಪ್ರಜ್ಞಾವಂತರ ಬೇಸರ.</p>.<p>ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಜಿಲ್ಲೆಯಲ್ಲಿ ಮೊಬೈಲ್ ಫೋನ್ಗಳ ಬಿಡಿಭಾಗಗಳ ಘಟಕ ಸ್ಥಾಪಿಸಲಾಗುತ್ತದೆ ಎಂದು ಘೋಷಿಸಿದ್ದರು. ಅದಾಗಿ ಎರಡು ವರ್ಷಗಳೇ ಕಳೆದರೂ ಈವರೆಗೆ ಆ ಘಟಕ ಸ್ಥಾಪನೆಯ ಸಣ್ಣ ಕುರುಹು ಸಹ ಜಿಲ್ಲೆಯಲ್ಲಿ ಕಾಣಿಸಿಕೊಂಡಿಲ್ಲ. ಒಂದೇ ಒಂದು ಉದ್ಯೋಗ ಸಹ ಸೃಷ್ಟಿಯಾಗಿಲ್ಲ.</p>.<p>ಪರಿಸ್ಥಿತಿ ಹೀಗಿರುವಾಗಲೇ, ‘ರಾಜ್ಯ ಸರ್ಕಾರ ಇದೀಗ ಜಿಲ್ಲೆಯಲ್ಲಿ ಎಲೆಕ್ಟ್ರಿಕ್ ವಾಹನ ತಯಾರಿಕೆ, ಲಿಥಿಯಂ ಬ್ಯಾಟರಿ ಉತ್ಪಾದನಾ ಘಟಕ ಆರಂಭಕ್ಕೆ ಅನುಮೋದನೆ ನೀಡಿರುವುದು ಕಣ್ಣೊರೆಸುವ ತಂತ್ರವಾಗಿದೆ. ಇವು ಘೋಷಣೆಗಳಿಗಷ್ಟೇ ಸೀಮಿತ’ ಎನ್ನುವುದು ಸಾರ್ವಜನಿಕ ವಲಯದ ವಿಶ್ಲೇಷಣೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>