<p><strong>ಗುಡಿಬಂಡೆ:</strong> ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ಆರು ಗಂಟೆಯಿಂದ ವಿದ್ಯುತ್ ಸಂಪರ್ಕವಿಲ್ಲದೆ ರೋಗಿಗಳು ಕತ್ತಲೆಯಲ್ಲಿ ಇದ್ದರು. ಆಸ್ಪತ್ರೆಯ ಕೊಠಡಿಗಳಲ್ಲಿ ಹೀಗೆ ಅಧ್ವಾನವಾಗಿದ್ದರೂ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಇತ್ತ ಸುಳಿಯಲಿಲ್ಲ!</p>.<p>ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ ಇರುವ ಬಗ್ಗೆ ಒಳ ರೋಗಿಗಳು ಹಾಗೂ ಸಾರ್ವಜನಿಕರು, ಆಸ್ಪತ್ರೆ ಸಿಬ್ಬಂದಿಗೆ ತುಂಬಾ ದಿನಗಳಿಂದ ಮಾಹಿತಿ ನೀಡಿದರೂ ಯಾವುದೇ ಕ್ರವಹಿಸುತ್ತಿಲ್ಲ.</p>.<p>‘ತಾಂತ್ರಿಕ ಸಮಸ್ಯೆ ಇದೆ. ತಡವಾಗುತ್ತೆ’ ಎಂಬ ಸಿದ್ದ ಉತ್ತರ ನೀಡುತ್ತಾರೆ ಎಂದು ರೋಗಿಗಳು ಆರೋಪಿಸಿದ್ದಾರೆ. ಒಳ ರೋಗಿಗಳು ಮೊಬೈಲ್ ಟಾರ್ಚ್ ಹಿಡಿದು ಊಟ ಮಾಡಿದರು.</p>.<p>ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ ಇರುವ ವಿಚಾರ ಗೊತ್ತಿದ್ದರೂ ಪರ್ಯಾಯ ವ್ಯವಸ್ಥೆ ಮಾಡದಿರುವ ಬಗ್ಗೆ ರೋಗಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. </p>.<p>‘ಶನಿವಾರ ಸಂಜೆಯಿಂದ ವಿದ್ಯುತ್ ಇಲ್ಲ. ಕತ್ತಲೆಯಲ್ಲಿಯೇ ಮಲಗಿದ್ದೇವೆ. ಕೊಠಡಿಯೊಳಗೆ ಯಾರು ಬರುತ್ತಾರೋ ಯಾರು ಹೋಗುತ್ತಾರೋ ಗೊತ್ತಾಗುತ್ತಿಲ್ಲ’ ಎಂದು ರೋಗಿಗಳು ಬೇಸರ ವ್ಯಕ್ತಪಡಿಸಿದರು.</p>.<p>ಬಾಣಂತಿಯರ ಕೊಠಡಿಯಲ್ಲಿ ಕಂದಮ್ಮಗಳನ್ನು ಕತ್ತಲಿನಲ್ಲಿ ನೋಡಿಕೊಳ್ಳಲು ಪೋಷಕರು ಹರಸಾಹಸಪಡುತ್ತಿದ್ದ ದೃಶ್ಯ ಕಂಡು ಬಂದಿತು.</p>.<p>‘ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಅವರು ಈ ಕುರಿತು ಸೂಕ್ತ ಕ್ರಮ ಜರುಗಿಸಬೇಕು. ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ರೋಗಿಗಳು ಒತ್ತಾಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ:</strong> ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ಆರು ಗಂಟೆಯಿಂದ ವಿದ್ಯುತ್ ಸಂಪರ್ಕವಿಲ್ಲದೆ ರೋಗಿಗಳು ಕತ್ತಲೆಯಲ್ಲಿ ಇದ್ದರು. ಆಸ್ಪತ್ರೆಯ ಕೊಠಡಿಗಳಲ್ಲಿ ಹೀಗೆ ಅಧ್ವಾನವಾಗಿದ್ದರೂ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಇತ್ತ ಸುಳಿಯಲಿಲ್ಲ!</p>.<p>ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ ಇರುವ ಬಗ್ಗೆ ಒಳ ರೋಗಿಗಳು ಹಾಗೂ ಸಾರ್ವಜನಿಕರು, ಆಸ್ಪತ್ರೆ ಸಿಬ್ಬಂದಿಗೆ ತುಂಬಾ ದಿನಗಳಿಂದ ಮಾಹಿತಿ ನೀಡಿದರೂ ಯಾವುದೇ ಕ್ರವಹಿಸುತ್ತಿಲ್ಲ.</p>.<p>‘ತಾಂತ್ರಿಕ ಸಮಸ್ಯೆ ಇದೆ. ತಡವಾಗುತ್ತೆ’ ಎಂಬ ಸಿದ್ದ ಉತ್ತರ ನೀಡುತ್ತಾರೆ ಎಂದು ರೋಗಿಗಳು ಆರೋಪಿಸಿದ್ದಾರೆ. ಒಳ ರೋಗಿಗಳು ಮೊಬೈಲ್ ಟಾರ್ಚ್ ಹಿಡಿದು ಊಟ ಮಾಡಿದರು.</p>.<p>ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ ಇರುವ ವಿಚಾರ ಗೊತ್ತಿದ್ದರೂ ಪರ್ಯಾಯ ವ್ಯವಸ್ಥೆ ಮಾಡದಿರುವ ಬಗ್ಗೆ ರೋಗಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. </p>.<p>‘ಶನಿವಾರ ಸಂಜೆಯಿಂದ ವಿದ್ಯುತ್ ಇಲ್ಲ. ಕತ್ತಲೆಯಲ್ಲಿಯೇ ಮಲಗಿದ್ದೇವೆ. ಕೊಠಡಿಯೊಳಗೆ ಯಾರು ಬರುತ್ತಾರೋ ಯಾರು ಹೋಗುತ್ತಾರೋ ಗೊತ್ತಾಗುತ್ತಿಲ್ಲ’ ಎಂದು ರೋಗಿಗಳು ಬೇಸರ ವ್ಯಕ್ತಪಡಿಸಿದರು.</p>.<p>ಬಾಣಂತಿಯರ ಕೊಠಡಿಯಲ್ಲಿ ಕಂದಮ್ಮಗಳನ್ನು ಕತ್ತಲಿನಲ್ಲಿ ನೋಡಿಕೊಳ್ಳಲು ಪೋಷಕರು ಹರಸಾಹಸಪಡುತ್ತಿದ್ದ ದೃಶ್ಯ ಕಂಡು ಬಂದಿತು.</p>.<p>‘ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಅವರು ಈ ಕುರಿತು ಸೂಕ್ತ ಕ್ರಮ ಜರುಗಿಸಬೇಕು. ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ರೋಗಿಗಳು ಒತ್ತಾಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>