<p>ಗೌರಿಬಿದನೂರು: ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳು ದಾನಿಗಳು ಮತ್ತು ಸಂಘ, ಸಂಸ್ಥೆಗಳು ನೀಡುವ ಸಹಕಾರ ಪಡೆದು ಶೈಕ್ಷಣಿಕ ಪ್ರಗತಿ ಸಾಧಿಸಬೇಕಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಶ್ರೀನಿವಾಸಮೂರ್ತಿ ತಿಳಿಸಿದರು.</p>.<p>ತಾಲ್ಲೂಕಿನ ಗೆದರೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ನೆರವಾಗುವ ನಿಟ್ಟಿನಲ್ಲಿ ನಮ್ಮ ಚಾಲಕರ ಟ್ರೇಡ್ ಯೂನಿಯನ್ ವತಿಯಿಂದ ವಿತರಿಸಿದ ಮಾಸ್ಕ್, ಸ್ಯಾನಿಟರಿ, ಥರ್ಮಲ್ ಸ್ಕ್ರೀನಿಂಗ್ ಸೇರಿದಂತೆ ಇನ್ನಿತರ ಪರಿಕರಗಳನ್ನು ಪಡೆದು ಅವರು ಮಾತನಾಡಿದರು.</p>.<p>ಸ್ಥಳೀಯ ದಾನಿಗಳು ಹಾಗೂ ಸಂಘ, ಸಂಸ್ಥೆಗಳು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನೀಡುವ ಪರಿಕರಗಳು ಅವರ ಸುಸ್ಥಿರವಾದ ಆರೋಗ್ಯ ಕಾಪಾಡಲು ಸಹಕಾರಿಯಾಗುತ್ತದೆ ಎಂದರು.</p>.<p>ನಮ್ಮ ಚಾಲಕರ ಯೂನಿಯನ್ ಟ್ರೇಡ್ನ ರಾಜ್ಯ ಗೌರವಾಧ್ಯಕ್ಷ ಕೆ.ಎಚ್. ಪದ್ಮರಾಜ್ ಜೈನ್ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ದೇಶದ ಭವಿಷ್ಯ ನಿರ್ಧರಿಸುವಂತಹ ಶಕ್ತಿ ಮತ್ತು ಚಾಣಾಕ್ಷತನ ಹೊಂದಿರುತ್ತಾರೆ ಎಂದರು.</p>.<p>ಮುಖ್ಯಶಿಕ್ಷಕರಾದ ಜಿ.ಎನ್. ವಾಸನ್, ಪಿಎಸ್ಐ ಮೋಹನ್, ನಮ್ಮ ಚಾಲಕರ ಯೂನಿಯನ್ ಟ್ರೇಡ್ನ ಜಿಲ್ಲಾ ಘಟಕದ ಅಧ್ಯಕ್ಷ ಛತ್ರಂ ಶ್ರೀಧರ್, ಟಿಪಿಒ ಹನುಮಂತರೆಡ್ಡಿ, ಪಿಡಿಒ ಸತ್ಯಪ್ರಸಾದ್, ಶಿಕ್ಷಕರಾದ ಜಿ.ಸಿ. ರಾಮಚಂದ್ರಯ್ಯ, ರಮೇಶ್, ಎ. ಭಾರತಿ, ಅಂಜಿನಪ್ಪ, ನಾಗರಾಜು, ಪೆದ್ದಗಂಗಪ್ಪ<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೌರಿಬಿದನೂರು: ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳು ದಾನಿಗಳು ಮತ್ತು ಸಂಘ, ಸಂಸ್ಥೆಗಳು ನೀಡುವ ಸಹಕಾರ ಪಡೆದು ಶೈಕ್ಷಣಿಕ ಪ್ರಗತಿ ಸಾಧಿಸಬೇಕಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಶ್ರೀನಿವಾಸಮೂರ್ತಿ ತಿಳಿಸಿದರು.</p>.<p>ತಾಲ್ಲೂಕಿನ ಗೆದರೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ನೆರವಾಗುವ ನಿಟ್ಟಿನಲ್ಲಿ ನಮ್ಮ ಚಾಲಕರ ಟ್ರೇಡ್ ಯೂನಿಯನ್ ವತಿಯಿಂದ ವಿತರಿಸಿದ ಮಾಸ್ಕ್, ಸ್ಯಾನಿಟರಿ, ಥರ್ಮಲ್ ಸ್ಕ್ರೀನಿಂಗ್ ಸೇರಿದಂತೆ ಇನ್ನಿತರ ಪರಿಕರಗಳನ್ನು ಪಡೆದು ಅವರು ಮಾತನಾಡಿದರು.</p>.<p>ಸ್ಥಳೀಯ ದಾನಿಗಳು ಹಾಗೂ ಸಂಘ, ಸಂಸ್ಥೆಗಳು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನೀಡುವ ಪರಿಕರಗಳು ಅವರ ಸುಸ್ಥಿರವಾದ ಆರೋಗ್ಯ ಕಾಪಾಡಲು ಸಹಕಾರಿಯಾಗುತ್ತದೆ ಎಂದರು.</p>.<p>ನಮ್ಮ ಚಾಲಕರ ಯೂನಿಯನ್ ಟ್ರೇಡ್ನ ರಾಜ್ಯ ಗೌರವಾಧ್ಯಕ್ಷ ಕೆ.ಎಚ್. ಪದ್ಮರಾಜ್ ಜೈನ್ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ದೇಶದ ಭವಿಷ್ಯ ನಿರ್ಧರಿಸುವಂತಹ ಶಕ್ತಿ ಮತ್ತು ಚಾಣಾಕ್ಷತನ ಹೊಂದಿರುತ್ತಾರೆ ಎಂದರು.</p>.<p>ಮುಖ್ಯಶಿಕ್ಷಕರಾದ ಜಿ.ಎನ್. ವಾಸನ್, ಪಿಎಸ್ಐ ಮೋಹನ್, ನಮ್ಮ ಚಾಲಕರ ಯೂನಿಯನ್ ಟ್ರೇಡ್ನ ಜಿಲ್ಲಾ ಘಟಕದ ಅಧ್ಯಕ್ಷ ಛತ್ರಂ ಶ್ರೀಧರ್, ಟಿಪಿಒ ಹನುಮಂತರೆಡ್ಡಿ, ಪಿಡಿಒ ಸತ್ಯಪ್ರಸಾದ್, ಶಿಕ್ಷಕರಾದ ಜಿ.ಸಿ. ರಾಮಚಂದ್ರಯ್ಯ, ರಮೇಶ್, ಎ. ಭಾರತಿ, ಅಂಜಿನಪ್ಪ, ನಾಗರಾಜು, ಪೆದ್ದಗಂಗಪ್ಪ<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>