‘ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ಬರಗಾಲ ಎದುರಾಗಿದೆ. ಕಡಿಮೆ ನೀರಿನಲ್ಲಿ ಬೆಳೆಯಲಾಗುವಂತಹ ಸಿರಿಧಾನ್ಯ ಬೆಳೆಗಳಿಗೆ ರೈತರು ಹೆಚ್ಚು ಆದ್ಯತೆ ನೀಡಲು ಅರಿವು ಮೂಡಿಸಿ. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗಬೇಕಾದರೆ ಮಾರುಕಟ್ಟೆಯಲ್ಲಿ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಾಗಬೇಕು. ಹಾಗಾಗಿ, ಸಿರಿಧಾನ್ಯಗಳ ಮಾರುಕಟ್ಟೆಯನ್ನು ವಿಸ್ತರಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು’ ಎಂದು ಹೇಳಿದರು.