<p><strong>ಶಿಡ್ಲಘಟ್ಟ:</strong> ‘ಪ್ರತಿ ಮಗುವಿನಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆ, ಕಲೆ, ಸಂಗೀತ, ಕೌಶಲ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವಾಗಬೇಕು. ಜನ್ಮದತ್ತವಾಗಿ ಬಂದಿರುವ ಅರಿವನ್ನು ಜಾಗೃತಗೊಳಿಸಬೇಕು’ ಎಂದು ನೆಹರೂ ಯುವ ಕೇಂದ್ರದ ಪ್ರತಿನಿಧಿ ವಿ. ಪ್ರಶಾಂತ್ ತಿಳಿಸಿದರು.</p>.<p>ತಾಲ್ಲೂಕಿನ ಸುಗಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಂಗಳವಾರ ನೆಹರೂ ಯುವ ಕೇಂದ್ರದಿಂದ ಯುವ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿದ್ದ ಯುವಜನೋತ್ಸವ, ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಯುವಜನರಲ್ಲಿ ನೈತಿಕ, ಆಧ್ಯಾತ್ಮಿಕ, ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಕಲೆ, ಯೋಗ, ನೃತ್ಯ, ಸಂಗೀತ ಚಟುವಟಿಕೆಗಳ ಮೂಲಕ ಮರುಹುಟ್ಟು ಕೊಡಬೇಕು. ಪಠ್ಯ ಮತ್ತು ಔಪಚಾರಿಕ ಶಿಕ್ಷಣದೊಂದಿಗೆ ಸಂಸ್ಕೃತಿ, ಪರಂಪರೆಯನ್ನು ಪರಿಚಯಿಸುವ, ಸಂಸ್ಕಾರ ಕೊಡಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ಮಾತನಾಡಿ, ದೇಶದಲ್ಲಿ ಪ್ರತಿಭಾ ಪಲಾಯನವಾಗದಂತೆ ನೋಡಿಕೊಳ್ಳಬೇಕು. ಯುವಪೀಳಿಗೆಯ ಮನಸ್ಸು, ಭಾವನೆಗಳನ್ನು ಅರಳಿಸುವ ಚಟುವಟಿಕೆಗಳು ಹೆಚ್ಚು ಆಯೋಜನೆಗೊಳ್ಳಬೇಕು ಎಂದು ಹೇಳಿದರು.</p>.<p>ಗ್ರಾಮೀಣ ಕಲೆ, ಸಂಗೀತ, ಸಂಸ್ಕೃತಿ ಉಳಿಸುವಲ್ಲಿ ಎಲ್ಲರ ಪಾತ್ರವಿದೆ. ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಯುವಪೀಳಿಗೆಯು ಮಾದರಿಯಾಗಿ ಸ್ವೀಕರಿಸಬೇಕು ಎಂದರು.</p>.<p>ವಿದ್ಯಾರ್ಥಿಗಳಿಗೆ ನೃತ್ಯ, ಗೀತಗಾಯನ, ಭಾಷಣ ಸ್ಪರ್ಧೆ ನಡೆಸಿ ಪ್ರಶಸ್ತಿ ಪತ್ರ, ಪುಸ್ತಕ ಬಹುಮಾನಗಳನ್ನು ವಿತರಿಸಲಾಯಿತು.</p>.<p>ಎನ್ಎಸ್ಎಸ್ ಸ್ವಯಂಸೇವಕ ಜಿ.ಎನ್. ಗಗನ್, ಮುಖ್ಯಶಿಕ್ಷಕಿ ಉಮಾದೇವಿ, ಶಿಕ್ಷಕಿ ತಾಜೂನ್, ಶಿಕ್ಷಕ ಎ.ಬಿ. ನಾಗರಾಜ, ಬಿ. ನಾಗರಾಜು, ಲಕ್ಷ್ಮಯ್ಯ, ಅಂಗನವಾಡಿ ಕಾರ್ಯಕರ್ತೆ ಜಯಂತಿ, ಮಂಜುಳಾ, ಗ್ರಾಮಸ್ಥರಾದ ಶ್ರೀನಿವಾಸ್, ಭರತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ‘ಪ್ರತಿ ಮಗುವಿನಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆ, ಕಲೆ, ಸಂಗೀತ, ಕೌಶಲ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವಾಗಬೇಕು. ಜನ್ಮದತ್ತವಾಗಿ ಬಂದಿರುವ ಅರಿವನ್ನು ಜಾಗೃತಗೊಳಿಸಬೇಕು’ ಎಂದು ನೆಹರೂ ಯುವ ಕೇಂದ್ರದ ಪ್ರತಿನಿಧಿ ವಿ. ಪ್ರಶಾಂತ್ ತಿಳಿಸಿದರು.</p>.<p>ತಾಲ್ಲೂಕಿನ ಸುಗಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಂಗಳವಾರ ನೆಹರೂ ಯುವ ಕೇಂದ್ರದಿಂದ ಯುವ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿದ್ದ ಯುವಜನೋತ್ಸವ, ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಯುವಜನರಲ್ಲಿ ನೈತಿಕ, ಆಧ್ಯಾತ್ಮಿಕ, ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಕಲೆ, ಯೋಗ, ನೃತ್ಯ, ಸಂಗೀತ ಚಟುವಟಿಕೆಗಳ ಮೂಲಕ ಮರುಹುಟ್ಟು ಕೊಡಬೇಕು. ಪಠ್ಯ ಮತ್ತು ಔಪಚಾರಿಕ ಶಿಕ್ಷಣದೊಂದಿಗೆ ಸಂಸ್ಕೃತಿ, ಪರಂಪರೆಯನ್ನು ಪರಿಚಯಿಸುವ, ಸಂಸ್ಕಾರ ಕೊಡಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ಮಾತನಾಡಿ, ದೇಶದಲ್ಲಿ ಪ್ರತಿಭಾ ಪಲಾಯನವಾಗದಂತೆ ನೋಡಿಕೊಳ್ಳಬೇಕು. ಯುವಪೀಳಿಗೆಯ ಮನಸ್ಸು, ಭಾವನೆಗಳನ್ನು ಅರಳಿಸುವ ಚಟುವಟಿಕೆಗಳು ಹೆಚ್ಚು ಆಯೋಜನೆಗೊಳ್ಳಬೇಕು ಎಂದು ಹೇಳಿದರು.</p>.<p>ಗ್ರಾಮೀಣ ಕಲೆ, ಸಂಗೀತ, ಸಂಸ್ಕೃತಿ ಉಳಿಸುವಲ್ಲಿ ಎಲ್ಲರ ಪಾತ್ರವಿದೆ. ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಯುವಪೀಳಿಗೆಯು ಮಾದರಿಯಾಗಿ ಸ್ವೀಕರಿಸಬೇಕು ಎಂದರು.</p>.<p>ವಿದ್ಯಾರ್ಥಿಗಳಿಗೆ ನೃತ್ಯ, ಗೀತಗಾಯನ, ಭಾಷಣ ಸ್ಪರ್ಧೆ ನಡೆಸಿ ಪ್ರಶಸ್ತಿ ಪತ್ರ, ಪುಸ್ತಕ ಬಹುಮಾನಗಳನ್ನು ವಿತರಿಸಲಾಯಿತು.</p>.<p>ಎನ್ಎಸ್ಎಸ್ ಸ್ವಯಂಸೇವಕ ಜಿ.ಎನ್. ಗಗನ್, ಮುಖ್ಯಶಿಕ್ಷಕಿ ಉಮಾದೇವಿ, ಶಿಕ್ಷಕಿ ತಾಜೂನ್, ಶಿಕ್ಷಕ ಎ.ಬಿ. ನಾಗರಾಜ, ಬಿ. ನಾಗರಾಜು, ಲಕ್ಷ್ಮಯ್ಯ, ಅಂಗನವಾಡಿ ಕಾರ್ಯಕರ್ತೆ ಜಯಂತಿ, ಮಂಜುಳಾ, ಗ್ರಾಮಸ್ಥರಾದ ಶ್ರೀನಿವಾಸ್, ಭರತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>