<p><strong>ಚಿಕ್ಕಬಳ್ಳಾಪುರ: </strong>‘ಜಿಲ್ಲೆಯಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 9ರ ವರಗೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ 15,476 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮುಖಗವಸು (ಮಾಸ್ಕ್) ಹಾಕಿಕೊಂಡು ಪರೀಕ್ಷೆ ಬರೆಯಬಹುದು. ಯಾವುದೇ ತರಹದ ಡಿಜಿಟಲ್ ಕೈಗಡಿಯಾರ ಬಳಸದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಜಿ.ನಾಗೇಶ್ ಮಾತನಾಡಿ, ‘ಈ ಬಾರಿ ಬಾಗೇಪಲ್ಲಿಯಲ್ಲಿ- 7, ಚಿಕ್ಕಬಳ್ಳಾಪುರ -15, ಚಿಂತಾಮಣಿ- 14, ಗೌರಿಬಿದನೂರು- 14, ಗುಡಿಬಂಡೆ -4, ಶಿಡ್ಲಘಟ್ಟ- 10 ಹೀಗೆ ಜಿಲ್ಲೆಯಲ್ಲಿ ಒಟ್ಟು 64 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಕೇಂದ್ರಗಳಲ್ಲಿರುವ 645 ಪರೀಕ್ಷಾ ಕೊಠಡಿಗಳಲ್ಲಿ ಸಿ.ಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ಸ್ವೀಕರಿಸಲು ಮುಖ್ಯ ಅಧೀಕ್ಷಕರು ಮತ್ತು ಮೇಲ್ವಿಚಾಕರನ್ನು ನೇಮಕ ಮಾಡಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಒಳಗೊಂಡಂತೆ ಪ್ರತಿ ತಾಲ್ಲೂಕಿಗೊಂದರಂತೆ ಆರು ಜಾಗೃತ ದಳಗಳನ್ನು ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ 29 ಮಾರ್ಗಾಧಿಕಾರಿಗಳನ್ನು ನಿಯೋಜಿಸಲಾಗಿದೆ’ ಎಂದು ತಿಳಿಸಿದರು.</p>.<p>ಡಿವೈಎಸ್ಪಿ ರವಿಶಂಕರ್, ಜಿಲ್ಲಾ ಖಜಾನೆ ಉಪನಿರ್ದೇಶಕ ಬಿ.ಎಂ.ಮುನಿರೆಡ್ಡಿ ಹಾಗೂ ಎಲ್ಲಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರು ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>‘ಜಿಲ್ಲೆಯಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 9ರ ವರಗೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ 15,476 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮುಖಗವಸು (ಮಾಸ್ಕ್) ಹಾಕಿಕೊಂಡು ಪರೀಕ್ಷೆ ಬರೆಯಬಹುದು. ಯಾವುದೇ ತರಹದ ಡಿಜಿಟಲ್ ಕೈಗಡಿಯಾರ ಬಳಸದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಜಿ.ನಾಗೇಶ್ ಮಾತನಾಡಿ, ‘ಈ ಬಾರಿ ಬಾಗೇಪಲ್ಲಿಯಲ್ಲಿ- 7, ಚಿಕ್ಕಬಳ್ಳಾಪುರ -15, ಚಿಂತಾಮಣಿ- 14, ಗೌರಿಬಿದನೂರು- 14, ಗುಡಿಬಂಡೆ -4, ಶಿಡ್ಲಘಟ್ಟ- 10 ಹೀಗೆ ಜಿಲ್ಲೆಯಲ್ಲಿ ಒಟ್ಟು 64 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಕೇಂದ್ರಗಳಲ್ಲಿರುವ 645 ಪರೀಕ್ಷಾ ಕೊಠಡಿಗಳಲ್ಲಿ ಸಿ.ಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ಸ್ವೀಕರಿಸಲು ಮುಖ್ಯ ಅಧೀಕ್ಷಕರು ಮತ್ತು ಮೇಲ್ವಿಚಾಕರನ್ನು ನೇಮಕ ಮಾಡಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಒಳಗೊಂಡಂತೆ ಪ್ರತಿ ತಾಲ್ಲೂಕಿಗೊಂದರಂತೆ ಆರು ಜಾಗೃತ ದಳಗಳನ್ನು ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ 29 ಮಾರ್ಗಾಧಿಕಾರಿಗಳನ್ನು ನಿಯೋಜಿಸಲಾಗಿದೆ’ ಎಂದು ತಿಳಿಸಿದರು.</p>.<p>ಡಿವೈಎಸ್ಪಿ ರವಿಶಂಕರ್, ಜಿಲ್ಲಾ ಖಜಾನೆ ಉಪನಿರ್ದೇಶಕ ಬಿ.ಎಂ.ಮುನಿರೆಡ್ಡಿ ಹಾಗೂ ಎಲ್ಲಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರು ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>