ಅಂಗನವಾಡಿಗಳಿಗೆ ಅಗತ್ಯವಿರುವ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಕಳೆದ 2 ವರ್ಷಗಳಿಂದ 20 ಹೊಸ ಕಟ್ಟಡಕ್ಕೆ ಮಂಜೂರಾತಿ ದೊರೆತಿದ್ದು ಟೆಂಡರ್ ಪ್ರಕ್ರಿಯೆ ಮುಗಿದಿದೆ. ಶೀಘ್ರದಲ್ಲೆ ಕಾಮಗಾರಿ ಆರಂಭವಾಗಲಿದೆ
ಮಹೇಶ್ ಬಾಬು ಶಿಶು ಅಭಿವೃದ್ಧಿ ಯೋಜನಾಧಿಕಾರಿ
ಬೇಡಿಕೆ ಈಡೇರಿಸುತ್ತಿಲ್ಲ ಕೇಂದ್ರ ಸರ್ಕಾರ
ಐಸಿಡಿಎಸ್ ಯೋಜನೆಯ ಅನುದಾನ ಕಡಿತಗೊಳಿಸುತ್ತಿದೆ. ದಶಕಗಳಿಂದಲೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ರಾಜ್ಯ ಸರ್ಕಾರವೂ ಸ್ಪಂದಿಸುತ್ತಿಲ್ಲ. ಮಾರ್ಚ್ 7 ರಿಂದ ಎಲ್ಲ ಅಂಗನವಾಡಿಗಳನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಎಚ್.ಜಿ.ಲಕ್ಷ್ಮಿನರಸಮ್ಮ ಅಂಗನವಾಡಿ ಕಾರ್ಯಕರ್ತೆಯರ ಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿ ಗೌರವಧನ ಕಡಿಮೆ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ಗೌರವಧನ ತುಂಬಾ ಕಡಿಮೆ. ಬೆಲೆ ಏರಿಕೆಯ ಕಾಲದಲ್ಲಿ ಜೀವನ ನಡೆಸುವುದಾದರೂ ಹೇಗೆ? ಮಾತೃಪೂರ್ಣ ಮಾತೃವಂದನಾ ಭಾಗ್ಯಲಕ್ಷ್ಮಿ ಯೋಜನೆ ಬಾಲ್ಯ ವಿವಾಹ ತಡೆಗಟ್ಟುವಿಕೆ ಮತ್ತಿತರ ಎಲ್ಲ ಸಮೀಕ್ಷೆಗಳಿಗೂ ಅಂಗನವಾಡಿ ಕಾರ್ಯಕರ್ತೆಯರು ಬೇಕು. ಆದರೆ ಸಮರ್ಪಕವಾದ ವೇತನ ಮಾತ್ರ ನೀಡುತ್ತಿಲ್ಲ. ನಾಗವೇಣಿ ಅಂಗನವಾಡಿ ಕಾರ್ಯಕರ್ತೆ ಮೂಲ ಸೌಲಭ್ಯ ಒದಗಿಸಿ ನಾವು ಕೂಲಿ-ನಾಲಿ ಮಾಡಿ ಸಂಸಾರ ಬಂಡಿ ಸಾಗಿಸುತ್ತಿದ್ದೇವೆ. ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸುವ ಶಕ್ತಿ ಇಲ್ಲ. ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಿ ಕೂಲಿಗೆ ಹೋಗುತ್ತೇವೆ. ಅಂಗನವಾಡಿಗಳಿಗೆ ಸರ್ಕಾರ ಮೂಲ ಸೌಲಭ್ಯ ಒದಗಿಸಿ ಉತ್ತಮ ಕಲಿಕಾ ವಾತಾವರಣ ನಿರ್ಮಾಣ ಮಾಡಬೇಕು. ಲಕ್ಷ್ಮಿದೇವಮ್ಮ ಪೋಷಕಿ