<p><strong>ಬಾಗೇಪಲ್ಲಿ</strong>: ತಾಲ್ಲೂಕಿನ ಮಾಡಪ್ಪಲ್ಲಿ ಗ್ರಾಮದ ಬಳಿ ಸರ್ಕಾರದ ಅನುಮತಿ ಪಡೆದುಕಲ್ಲುಗಣಿಗಾರಿಕೆ ನಡೆಸುತ್ತಿರುವ ಪ್ರದೇಶಗಳಲ್ಲಿ ಜಿಲೆಟಿನ್ ಸ್ಫೋಟಕ ಸಿಡಿಸುತ್ತಿರುವುದರಿಂದ ಬೃಹತ್ ಕಲ್ಲುಗಳು ರೈತರು ಹೊಲ, ಗದ್ದೆಗಳಿಗೆ ಬೀಳುತ್ತಿವೆ. ಇದರಿಂದಾಗಿ ಜನ-ಜಾನುವಾರುಗಳಿಗೆ ತೊಂದರೆ ಆಗಿದೆ.</p>.<p>ತಾಲ್ಲೂಕಿನ ಹೊನ್ನಂಪಲ್ಲಿ ಸಮೀಪದ ಮಾಡಪಲ್ಲಿ ಬೆಟ್ಟದಲ್ಲಿ ಕಲ್ಲುಗಣಿಗಾರಿಕೆ ನಡೆಯುತ್ತಿದೆ. ಆದರೆ ಗಣಿಗಾರಿಕೆ ನಡೆಸಲು ಹಾಕಿದ ಷರತ್ತುಗಳನ್ನು ಸಮರ್ಪಕ ರೀತಿಯಲ್ಲಿ ಪಾಲನೆ ಮಾಡುತ್ತಿಲ್ಲ. ಗಣಿಗಾರಿಕೆ ನಡೆಸುವ ಬೆಟ್ಟದ ಸುತ್ತಲೂ ರೈತರ ಜಮೀನು, ಹೊಲ, ಗದ್ದೆಗಳು ಇವೆ. ನಿತ್ಯವೂ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ.</p>.<p>ಇಂತಹ ಸಂದರ್ಭಗಳಲ್ಲಿ ಸ್ಪೋಟಿಸುವ ಸ್ಪೋಟಕಗಳಿಂದ ಬೃಹತ್ ಪ್ರಮಾಣದ ಕಲ್ಲುಬಂಡೆಗಳು ಅಡೆತಡೆ ಇಲ್ಲದೆ ನೇರವಾಗಿ ರೈತರ ಜಮೀನುಗಳಿಗೆ ನುಗ್ಗುತ್ತಿವೆ. ಇದರಿಂದಾಗಿ ರೈತರು ಪ್ರಾಣಭೀತಿಯಲ್ಲೇ ಕೃಷಿ ಚಟುವಟಿಕೆ ನಡೆಸದಂತೆ ಆಗಿದೆ. ಹಾಗೂ ಜಮೀನುಗಳಲ್ಲಿನ ಬೆಳೆ ನಾಶವಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಗಣಿಗಾರಿಕೆಗೆ ಅನುಮತಿ ನೀಡುವಾಗ ಪರಿಸರ ಮಾಲಿನ್ಯ, ರೈತರಿಗೆ ಹಾನಿ, ಜಲಮೂಲಗಳಿಗೆ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮ ಅಳವಡಿಸಿ ಗಣಿಗಾರಿಕೆ ನಡೆಸುವಂತೆ ಷರತ್ತು ವಿಧಿಸಲಾಗಿರುತ್ತದೆ. ಮಾಡಪಲ್ಲಿ ಬೆಟ್ಟದಲ್ಲಿ ಗಣಿಗಾರಿಕಾ ಪ್ರದೇಶದ ಸುತ್ತ ಕಲ್ಲುಬಂಡೆಗಳು ಉರುಳದಂತೆ ತಡೆಗೋಡೆ ಇಲ್ಲ. ಇದರಿಂದ ಕಲ್ಲುಗಳು ಉರುಳಿ ಹೊಲ-ಗದ್ದೆಗಳಿಗೆ ಬರುತ್ತಿದೆ. ಅಪಾರವಾದ ಸಸ್ಯ ಸಂಪತ್ತಿರುವ ಈ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಜನರಿಗೆ ಭಾರಿ ತೊಂದರೆ ಆಗುತ್ತಿದೆ ಎಂದು ಗ್ರಾಮದ ನರಸಿಂಹಮೂರ್ತಿ ತಿಳಿಸಿದರು.</p>.<p>ನಮ್ಮ ಜಮೀನು ಬೆಟ್ಟದ ತಪ್ಪಲಲ್ಲೇ ಇರುವುದರಿಂದ ಬೃಹತ್ ಬಂಡೆಗಳು ಉರುಳಿ ಬಿದ್ದಿವೆ. ಕಲ್ಲುಗಣಿಗಾರಿಕಾ ಲಾರಿಗಳ ಓಡಾಟಕ್ಕೆ ನಿರ್ಮಿಸಿಕೊಂಡ ರಸ್ತೆಯಿಂದಾಗಿ ಬೆಟ್ಟದ ಮಣ್ಣು ಆ ರಸ್ತೆಯ ಮೂಲಕ ಕೊಚ್ಚಿಕೊಂಡು ಬಂದು ನಮ್ಮ ಜಮೀನಿನಲ್ಲಿ ಮಣ್ಣಿನ ದಿಬ್ಬಗಳನ್ನು ನಿರ್ಮಿಸುತ್ತಿದೆ. ಇದರಿಂದಾಗಿ ಬಿತ್ತಿದ ಬೆಳೆ ಸಂಪೂರ್ಣ ನಾಶವಾಗಿದೆ ಎಂದು ರೈತ ಈಶ್ವರಪ್ಪ ನೋವು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ</strong>: ತಾಲ್ಲೂಕಿನ ಮಾಡಪ್ಪಲ್ಲಿ ಗ್ರಾಮದ ಬಳಿ ಸರ್ಕಾರದ ಅನುಮತಿ ಪಡೆದುಕಲ್ಲುಗಣಿಗಾರಿಕೆ ನಡೆಸುತ್ತಿರುವ ಪ್ರದೇಶಗಳಲ್ಲಿ ಜಿಲೆಟಿನ್ ಸ್ಫೋಟಕ ಸಿಡಿಸುತ್ತಿರುವುದರಿಂದ ಬೃಹತ್ ಕಲ್ಲುಗಳು ರೈತರು ಹೊಲ, ಗದ್ದೆಗಳಿಗೆ ಬೀಳುತ್ತಿವೆ. ಇದರಿಂದಾಗಿ ಜನ-ಜಾನುವಾರುಗಳಿಗೆ ತೊಂದರೆ ಆಗಿದೆ.</p>.<p>ತಾಲ್ಲೂಕಿನ ಹೊನ್ನಂಪಲ್ಲಿ ಸಮೀಪದ ಮಾಡಪಲ್ಲಿ ಬೆಟ್ಟದಲ್ಲಿ ಕಲ್ಲುಗಣಿಗಾರಿಕೆ ನಡೆಯುತ್ತಿದೆ. ಆದರೆ ಗಣಿಗಾರಿಕೆ ನಡೆಸಲು ಹಾಕಿದ ಷರತ್ತುಗಳನ್ನು ಸಮರ್ಪಕ ರೀತಿಯಲ್ಲಿ ಪಾಲನೆ ಮಾಡುತ್ತಿಲ್ಲ. ಗಣಿಗಾರಿಕೆ ನಡೆಸುವ ಬೆಟ್ಟದ ಸುತ್ತಲೂ ರೈತರ ಜಮೀನು, ಹೊಲ, ಗದ್ದೆಗಳು ಇವೆ. ನಿತ್ಯವೂ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ.</p>.<p>ಇಂತಹ ಸಂದರ್ಭಗಳಲ್ಲಿ ಸ್ಪೋಟಿಸುವ ಸ್ಪೋಟಕಗಳಿಂದ ಬೃಹತ್ ಪ್ರಮಾಣದ ಕಲ್ಲುಬಂಡೆಗಳು ಅಡೆತಡೆ ಇಲ್ಲದೆ ನೇರವಾಗಿ ರೈತರ ಜಮೀನುಗಳಿಗೆ ನುಗ್ಗುತ್ತಿವೆ. ಇದರಿಂದಾಗಿ ರೈತರು ಪ್ರಾಣಭೀತಿಯಲ್ಲೇ ಕೃಷಿ ಚಟುವಟಿಕೆ ನಡೆಸದಂತೆ ಆಗಿದೆ. ಹಾಗೂ ಜಮೀನುಗಳಲ್ಲಿನ ಬೆಳೆ ನಾಶವಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಗಣಿಗಾರಿಕೆಗೆ ಅನುಮತಿ ನೀಡುವಾಗ ಪರಿಸರ ಮಾಲಿನ್ಯ, ರೈತರಿಗೆ ಹಾನಿ, ಜಲಮೂಲಗಳಿಗೆ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮ ಅಳವಡಿಸಿ ಗಣಿಗಾರಿಕೆ ನಡೆಸುವಂತೆ ಷರತ್ತು ವಿಧಿಸಲಾಗಿರುತ್ತದೆ. ಮಾಡಪಲ್ಲಿ ಬೆಟ್ಟದಲ್ಲಿ ಗಣಿಗಾರಿಕಾ ಪ್ರದೇಶದ ಸುತ್ತ ಕಲ್ಲುಬಂಡೆಗಳು ಉರುಳದಂತೆ ತಡೆಗೋಡೆ ಇಲ್ಲ. ಇದರಿಂದ ಕಲ್ಲುಗಳು ಉರುಳಿ ಹೊಲ-ಗದ್ದೆಗಳಿಗೆ ಬರುತ್ತಿದೆ. ಅಪಾರವಾದ ಸಸ್ಯ ಸಂಪತ್ತಿರುವ ಈ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಜನರಿಗೆ ಭಾರಿ ತೊಂದರೆ ಆಗುತ್ತಿದೆ ಎಂದು ಗ್ರಾಮದ ನರಸಿಂಹಮೂರ್ತಿ ತಿಳಿಸಿದರು.</p>.<p>ನಮ್ಮ ಜಮೀನು ಬೆಟ್ಟದ ತಪ್ಪಲಲ್ಲೇ ಇರುವುದರಿಂದ ಬೃಹತ್ ಬಂಡೆಗಳು ಉರುಳಿ ಬಿದ್ದಿವೆ. ಕಲ್ಲುಗಣಿಗಾರಿಕಾ ಲಾರಿಗಳ ಓಡಾಟಕ್ಕೆ ನಿರ್ಮಿಸಿಕೊಂಡ ರಸ್ತೆಯಿಂದಾಗಿ ಬೆಟ್ಟದ ಮಣ್ಣು ಆ ರಸ್ತೆಯ ಮೂಲಕ ಕೊಚ್ಚಿಕೊಂಡು ಬಂದು ನಮ್ಮ ಜಮೀನಿನಲ್ಲಿ ಮಣ್ಣಿನ ದಿಬ್ಬಗಳನ್ನು ನಿರ್ಮಿಸುತ್ತಿದೆ. ಇದರಿಂದಾಗಿ ಬಿತ್ತಿದ ಬೆಳೆ ಸಂಪೂರ್ಣ ನಾಶವಾಗಿದೆ ಎಂದು ರೈತ ಈಶ್ವರಪ್ಪ ನೋವು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>