ಗಣಿಗಾರಿಕೆಗೆ ಅನುಮತಿ ನೀಡುವಾಗ ಪರಿಸರ ಮಾಲಿನ್ಯ, ರೈತರಿಗೆ ಹಾನಿ, ಜಲಮೂಲಗಳಿಗೆ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮ ಅಳವಡಿಸಿ ಗಣಿಗಾರಿಕೆ ನಡೆಸುವಂತೆ ಷರತ್ತು ವಿಧಿಸಲಾಗಿರುತ್ತದೆ. ಮಾಡಪಲ್ಲಿ ಬೆಟ್ಟದಲ್ಲಿ ಗಣಿಗಾರಿಕಾ ಪ್ರದೇಶದ ಸುತ್ತ ಕಲ್ಲುಬಂಡೆಗಳು ಉರುಳದಂತೆ ತಡೆಗೋಡೆ ಇಲ್ಲ. ಇದರಿಂದ ಕಲ್ಲುಗಳು ಉರುಳಿ ಹೊಲ-ಗದ್ದೆಗಳಿಗೆ ಬರುತ್ತಿದೆ. ಅಪಾರವಾದ ಸಸ್ಯ ಸಂಪತ್ತಿರುವ ಈ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಜನರಿಗೆ ಭಾರಿ ತೊಂದರೆ ಆಗುತ್ತಿದೆ ಎಂದು ಗ್ರಾಮದ ನರಸಿಂಹಮೂರ್ತಿ ತಿಳಿಸಿದರು.