ಕೆ. ವಿ. ಮತ್ತು ಪಂಚಗಿರಿ ಶಿಕ್ಷಣ ದತ್ತಿಗಳ ಅಧ್ಯಕ್ಷ ಕೆ. ವಿ. ನವೀನ್ ಕಿರಣ್ ಮಾತನಾಡಿ, ‘ಕ್ರೀಡೆಗಳು ಇಂದಿನ ದಿನಗಳಲ್ಲಿ ಉತ್ತಮವಾಗಿ ಮುನ್ನಡೆಯುತ್ತಿದ್ದು, ವಿದ್ಯಾರ್ಥಿಗಳೂ ಹುಮ್ಮಸ್ಸಿನಿಂದ ಪಾಲ್ಗೊಳ್ಳುತ್ತಿರುವುದು ಸಂತಸದ ವಿಚಾರ. ಕ್ರೀಡಾಪಟುಗಳು ಕ್ರೀಡಾ ಮನೋಭಾವನೆಯನ್ನು ಮೈಗೂಡಿಸಿಕೊಂಡು ರಾಜ್ಯವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಸಾಧನೆ ತೋರಬೇಕು’ ಎಂದರು.