<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಮಳೆ ಆರಂಭವಾಯಿತು. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿ ಬಹಳಷ್ಟು ಕೆರೆ, ಕೆಟ್ಟೆ, ಜಲಾಶಯಗಳು ಭರ್ತಿಯಾಗಿವೆ. ಮಳೆ ಸಂಭ್ರಮವನ್ನು ಮೂಡಿಸಿದೆ. ಚಿಕ್ಕಬಳ್ಳಾಪುರ ನಗರ ಹಾಗೂ ತಾಲ್ಲೂಕಿನಲ್ಲಿ ಬೆಳಿಗ್ಗೆಯೇ ಮಳೆ ಆರಂಭವಾಯಿತು. ಮಧ್ಯಾಹ್ನದವರೆಗೆ ಮಳೆ ಸುರಿಯಿತು. ಸಂಜೆಯವರೆಗೂ ಮೋಡದ ವಾತಾವರಣವಿತ್ತು.</p>.<p>ಚಿಕ್ಕಬಳ್ಳಾಪುರ ನಗರದ ಹೊರವಲಯದ ಶಿಡ್ಲಘಟ್ಟ ರಸ್ತೆಯಲ್ಲಿರುವ ಬೆಸ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಮಳೆ ನೀರು ರೈತರ ಹೊಲಗಳಿಗೆ ನುಗ್ಗಿದೆ. ಇಲ್ಲಿ ಹಾದಿ ಹೋಗಿರುವ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಿಲ್ಲ. ಇದರಿಂದ ನೀರು ರೈತರ ಹೊಲಗಳಿಗೆ ನುಗ್ಗಿದೆ ಎಂದು ನಾಗರಿಕ ವೆಂಕಟೇಶ್ ದೂರಿದರು. ಈ ಹೊಲಗಳಲ್ಲಿದ್ದ ಬಹಳಷ್ಟು ಬೆಳೆಗಳು ಸಹ ಹಾನಿಗೆ ತುತ್ತಾಗಿವೆ.</p>.<p>ಶ್ರೀನಿವಾಸ ಸಾಗರ ಕೆರೆ ಪ್ರವಾಸಿಗರ ನೆಚ್ಚಿನ ತಾಣ ಎನ್ನುವಂತೆ ಆಗಿದೆ. ಕಾರು, ಆಟೊ, ದ್ವಿಚಕ್ರ ವಾಹನಗಳಲ್ಲಿ ನಿತ್ಯ ಹೇರಳ ಸಂಖ್ಯೆಯಲ್ಲಿ ಇಲ್ಲಿಗೆ ಜನರು ಭೇಟಿ ನೀಡುತ್ತಿದ್ದಾರೆ. ಉಕ್ಕಿ ಹರಿಯುತ್ತಿರುವ ನೀರನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಜಕ್ಕಲಮಡುಗು ಜಲಾಶಯ ಸಹ ತುಂಬಿ ಹರಿಯುತ್ತಿದೆ.</p>.<p>ಗ್ರಾಮೀಣ ಭಾಗಗಳಲ್ಲಿ ಹೊಲಗಳಲ್ಲಿ ಹೇರಳವಾಗಿ ನೀರು ನಿಂತಿದೆ. ರಸ್ತೆಯ ಹೊಂಡಗಳಲ್ಲಿ, ಗುಂಡಿಗಳು ತುಂಬಿವೆ. ಗ್ರಾಮೀಣ ಭಾಗಗಳಲ್ಲಿ ಎತ್ತ ನೋಡಿದರೂ ಮಳೆ ನೀರು ಎನ್ನುವ ಸ್ಥಿತಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಮಳೆ ಆರಂಭವಾಯಿತು. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿ ಬಹಳಷ್ಟು ಕೆರೆ, ಕೆಟ್ಟೆ, ಜಲಾಶಯಗಳು ಭರ್ತಿಯಾಗಿವೆ. ಮಳೆ ಸಂಭ್ರಮವನ್ನು ಮೂಡಿಸಿದೆ. ಚಿಕ್ಕಬಳ್ಳಾಪುರ ನಗರ ಹಾಗೂ ತಾಲ್ಲೂಕಿನಲ್ಲಿ ಬೆಳಿಗ್ಗೆಯೇ ಮಳೆ ಆರಂಭವಾಯಿತು. ಮಧ್ಯಾಹ್ನದವರೆಗೆ ಮಳೆ ಸುರಿಯಿತು. ಸಂಜೆಯವರೆಗೂ ಮೋಡದ ವಾತಾವರಣವಿತ್ತು.</p>.<p>ಚಿಕ್ಕಬಳ್ಳಾಪುರ ನಗರದ ಹೊರವಲಯದ ಶಿಡ್ಲಘಟ್ಟ ರಸ್ತೆಯಲ್ಲಿರುವ ಬೆಸ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಮಳೆ ನೀರು ರೈತರ ಹೊಲಗಳಿಗೆ ನುಗ್ಗಿದೆ. ಇಲ್ಲಿ ಹಾದಿ ಹೋಗಿರುವ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಿಲ್ಲ. ಇದರಿಂದ ನೀರು ರೈತರ ಹೊಲಗಳಿಗೆ ನುಗ್ಗಿದೆ ಎಂದು ನಾಗರಿಕ ವೆಂಕಟೇಶ್ ದೂರಿದರು. ಈ ಹೊಲಗಳಲ್ಲಿದ್ದ ಬಹಳಷ್ಟು ಬೆಳೆಗಳು ಸಹ ಹಾನಿಗೆ ತುತ್ತಾಗಿವೆ.</p>.<p>ಶ್ರೀನಿವಾಸ ಸಾಗರ ಕೆರೆ ಪ್ರವಾಸಿಗರ ನೆಚ್ಚಿನ ತಾಣ ಎನ್ನುವಂತೆ ಆಗಿದೆ. ಕಾರು, ಆಟೊ, ದ್ವಿಚಕ್ರ ವಾಹನಗಳಲ್ಲಿ ನಿತ್ಯ ಹೇರಳ ಸಂಖ್ಯೆಯಲ್ಲಿ ಇಲ್ಲಿಗೆ ಜನರು ಭೇಟಿ ನೀಡುತ್ತಿದ್ದಾರೆ. ಉಕ್ಕಿ ಹರಿಯುತ್ತಿರುವ ನೀರನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಜಕ್ಕಲಮಡುಗು ಜಲಾಶಯ ಸಹ ತುಂಬಿ ಹರಿಯುತ್ತಿದೆ.</p>.<p>ಗ್ರಾಮೀಣ ಭಾಗಗಳಲ್ಲಿ ಹೊಲಗಳಲ್ಲಿ ಹೇರಳವಾಗಿ ನೀರು ನಿಂತಿದೆ. ರಸ್ತೆಯ ಹೊಂಡಗಳಲ್ಲಿ, ಗುಂಡಿಗಳು ತುಂಬಿವೆ. ಗ್ರಾಮೀಣ ಭಾಗಗಳಲ್ಲಿ ಎತ್ತ ನೋಡಿದರೂ ಮಳೆ ನೀರು ಎನ್ನುವ ಸ್ಥಿತಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>