‘ಅನರ್ಹ ಶಾಸಕರ ಕ್ಷೇತ್ರಗಳಿಗೆ ಹೆಚ್ಚು ಅನುದಾನ ನೀಡಿದ್ದೇ ಈ ಸರ್ಕಾರದ ಸಾಧನೆ’ ಎಂಬ ಸಿದ್ದರಾಮಯ್ಯ ಅವರ ಟೀಕೆ ಕುರಿತಂತೆ ನಗರದಲ್ಲಿ ಶುಕ್ರವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಯಾವ ನೋವಿನಿಂದ ಶಾಸಕರು ಪಕ್ಷದಿಂದ ಆಚೆ ಹೋಗಿದ್ದಾರೆ ಎನ್ನುವುದು ಕೆಲವರು ಇನ್ನೂ ಅರ್ಥ ಮಾಡಿಕೊಳ್ಳದೆ ಹೋದರೆ, ಆ ಬಗ್ಗೆ ಹೇಳಲು ನನ್ನಲ್ಲಿ ಪದಗಳಿಲ್ಲ. ಎಷ್ಟು ನೋವಿನಿಂದ ಶಾಸಕರು ಹೊರಗೆ ಹೋಗಿದ್ದಾರೆ ಎನ್ನುವುದು ಅವರಿಗಷ್ಟೇ ಗೊತ್ತು’ ಎಂದು ಹೇಳಿದರು.