ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಪಟ್ಟಣದ ಬಸ್ ನಿಲ್ದಾಣದ ಮುಂದೆ, ಹೋಬಳಿಯ ಪಾತಪಾಳ್ಯ, ಮಿಟ್ಟೇಮರಿ, ಗೂಳೂರು, ಚೇಳೂರು, ಕಸಬಾಗಳ ಗ್ರಾಮೀಣ ಪ್ರದೇಶಗಳಲ್ಲಿ ರೈತರು ರಸ್ತೆಗಳನ್ನು ತಡೆದು ಪ್ರತಿಭಟನೆ ಮಾಡಿದ್ದಾರೆ. ತಾಲ್ಲೂಕಿನ ಸಿಪಿಎಂ, ಕಾಂಗ್ರೆಸ್, ಜೆಡಿಎಸ್, ರೈತ ಸಂಘ, ಪ್ರಾಂತ ರೈತ ಸಂಘ, ಕೃಷಿಕೂಲಿಕಾರರ ಸಂಘಟನೆಗಳು, ದಲಿತ ಸಂಘರ್ಷ ಸಮಿತಿ, ಪ್ರಜಾ ಸಂಘರ್ಷ ಸಮಿತಿ, ಕನ್ನಡ, ಪ್ರಗತಿಪರ, ದಲಿತ ಪರ ಸಂಘಟನೆಗಳ ಮುಖಂಡರು ಪ್ರತಿ ಮನೆಗೆ ಹೋಗಿ ರೈತ ಮುಖಂಡರು, ಕಾಯ್ದೆಗಳ ಜಾರಿ ಆದರೆ ಮುಂದಾಗುವ ಸಮಸ್ಯೆಗಳ ಬಗ್ಗೆ ಜನಜಾಗೃತಿ ಮೂಡಿಸಿದ್ದರು.