<p><strong>ಶಿಡ್ಲಘಟ್ಟ:</strong> ಜುಲೈ 21ರಂದು ಬೆಳಗಾವಿ ಜಿಲ್ಲೆಯ ಯರಗುತ್ತಿ ತಾಲ್ಲೂಕಿನಲ್ಲಿ ರೈತ ಹುತಾತ್ಮ ದಿನಾಚರಣೆ ನಡೆಯಲಿದ್ದು, ಅದರಲ್ಲಿ ಭಾಗಿಯಾಗಿ ರೈತರ ಸಮಸ್ಯೆ ಚರ್ಚಿಸುತ್ತೇವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ತಿಳಿಸಿದರು.</p>.<p>ನಗರದ ರೈತ ಸಂಘ ಕಚೇರಿಯಲ್ಲಿ ರೈತ ಹುತಾತ್ಮರ ದಿನಾಚರಣೆಯಲ್ಲಿ ಭಾಗಿಯಾಗಲು ಕಾರ್ಯಕರ್ತರೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಸಮೀಪಿಸುತ್ತಿದೆ. ಅದರಲ್ಲಿ ಸ್ಪರ್ಧಿಸುವಂತೆ ರಾಜ್ಯ ಸಮಿತಿ ಆದೇಶಿಸಿದ್ದು, ಈ ಬಗ್ಗೆ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.</p>.<p>ತಾಲ್ಲೂಕಿನಲ್ಲಿ ಮುಂಗಾರು ಮಳೆ ಶುರುವಾಗಿದೆ. ರೈತರು ಕೃಷಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಾದ ಸಮಯವಿದು. ನಮ್ಮ ಕಾರ್ಯಕರ್ತರಾದ ರೈತರಿಗೆ ತೊಂದರೆಯಾಗದಂತೆ ಅವರಿಗೆ ಅಗತ್ಯ ಪರಿಕರಗಳು ಬೇಸಾಯದ ಸಮಯಕ್ಕೆ ಸರಿಯಾಗಿ ಸಿಗುವ ರೀತಿಯಲ್ಲಿ ವ್ಯವಸ್ಥೆ ಮಾಡಬೇಕಾಗಿದೆ ಎಂದರು.</p>.<p>ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಅಗತ್ಯ ಪದಾರ್ಥಗಳ ಏರಿಕೆಯಾಗಿ ರೈತರ ಪರಿಕರಗಳು, ಬೆಳೆದ ಉತ್ಪನ್ನಗಳಾದ ಹೂವು, ತರಕಾರಿ, ಹಣ್ಣುಗಳ ಸಾಗಾಣಿಕೆ ವೆಚ್ಚ, ಭೂಮಿ ಉಳುವ ಟ್ರ್ಯಾಕ್ಟರ್ ವೆಚ್ಚ ಹೊರೆಯಾಗುತ್ತಿದೆ. ಜುಲೈ 21ರಂದು ನಡೆಯಲಿರುವ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದು ನುಡಿದರು.</p>.<p>ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಜಿಲ್ಲಾ ಉಪಾಧ್ಯಕ್ಷ ಮುನಿನಂಜಪ್ಪ, ನಗರ ಘಟಕದ ಅಧ್ಯಕ್ಷ ಬಿ. ನಾರಾಯಣಸ್ವಾಮಿ, ತಮ್ಮಣ್ಣ, ಕೆಂಪಣ್ಣ, ಬಸವರಾಜ್, ಕೃಷ್ಣಪ್ಪ, ರಮೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ಜುಲೈ 21ರಂದು ಬೆಳಗಾವಿ ಜಿಲ್ಲೆಯ ಯರಗುತ್ತಿ ತಾಲ್ಲೂಕಿನಲ್ಲಿ ರೈತ ಹುತಾತ್ಮ ದಿನಾಚರಣೆ ನಡೆಯಲಿದ್ದು, ಅದರಲ್ಲಿ ಭಾಗಿಯಾಗಿ ರೈತರ ಸಮಸ್ಯೆ ಚರ್ಚಿಸುತ್ತೇವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ತಿಳಿಸಿದರು.</p>.<p>ನಗರದ ರೈತ ಸಂಘ ಕಚೇರಿಯಲ್ಲಿ ರೈತ ಹುತಾತ್ಮರ ದಿನಾಚರಣೆಯಲ್ಲಿ ಭಾಗಿಯಾಗಲು ಕಾರ್ಯಕರ್ತರೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಸಮೀಪಿಸುತ್ತಿದೆ. ಅದರಲ್ಲಿ ಸ್ಪರ್ಧಿಸುವಂತೆ ರಾಜ್ಯ ಸಮಿತಿ ಆದೇಶಿಸಿದ್ದು, ಈ ಬಗ್ಗೆ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.</p>.<p>ತಾಲ್ಲೂಕಿನಲ್ಲಿ ಮುಂಗಾರು ಮಳೆ ಶುರುವಾಗಿದೆ. ರೈತರು ಕೃಷಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಾದ ಸಮಯವಿದು. ನಮ್ಮ ಕಾರ್ಯಕರ್ತರಾದ ರೈತರಿಗೆ ತೊಂದರೆಯಾಗದಂತೆ ಅವರಿಗೆ ಅಗತ್ಯ ಪರಿಕರಗಳು ಬೇಸಾಯದ ಸಮಯಕ್ಕೆ ಸರಿಯಾಗಿ ಸಿಗುವ ರೀತಿಯಲ್ಲಿ ವ್ಯವಸ್ಥೆ ಮಾಡಬೇಕಾಗಿದೆ ಎಂದರು.</p>.<p>ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಅಗತ್ಯ ಪದಾರ್ಥಗಳ ಏರಿಕೆಯಾಗಿ ರೈತರ ಪರಿಕರಗಳು, ಬೆಳೆದ ಉತ್ಪನ್ನಗಳಾದ ಹೂವು, ತರಕಾರಿ, ಹಣ್ಣುಗಳ ಸಾಗಾಣಿಕೆ ವೆಚ್ಚ, ಭೂಮಿ ಉಳುವ ಟ್ರ್ಯಾಕ್ಟರ್ ವೆಚ್ಚ ಹೊರೆಯಾಗುತ್ತಿದೆ. ಜುಲೈ 21ರಂದು ನಡೆಯಲಿರುವ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದು ನುಡಿದರು.</p>.<p>ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಜಿಲ್ಲಾ ಉಪಾಧ್ಯಕ್ಷ ಮುನಿನಂಜಪ್ಪ, ನಗರ ಘಟಕದ ಅಧ್ಯಕ್ಷ ಬಿ. ನಾರಾಯಣಸ್ವಾಮಿ, ತಮ್ಮಣ್ಣ, ಕೆಂಪಣ್ಣ, ಬಸವರಾಜ್, ಕೃಷ್ಣಪ್ಪ, ರಮೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>