<p><strong>ಚಿಂತಾಮಣಿ: </strong>ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ಭಾನುವಾರ ನಡೆದ ಮುಖ್ಯಮಂತ್ರಿ ರೈತ ವಿದ್ಯಾಸಿರಿ ನಿಧಿ ಲೋಕಾರ್ಪಣೆ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ವ್ಯವಸ್ಥೆಯನ್ನು ತಾಲ್ಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಲ್ಲೂ ಮಾಡಲಾಗಿತ್ತು.</p>.<p>ಕಸಬಾ ಹೋಬಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕಿ ಅನುರೂಪಾ ಮಾತನಾಡಿ, ‘ರಾಜ್ಯ ಸರ್ಕಾರ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಪೋತ್ಸಾಹಿಸಲು ರೈತ ವಿದ್ಯಾನಿಧಿ ಶಿಷ್ಯವೇತನ ರೂಪಿಸಿದೆ’ ಎಂದು ತಿಳಿಸಿದರು.</p>.<p>ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಮೂಲಕ ರೈತರು ಮಾಹಿತಿ ಪಡೆದು ದಾಖಲಾತಿಗಳನ್ನು ಇಲಾಖೆಗಳಲ್ಲಿ ನೀಡಿ ಸದರಿ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಲು ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು.</p>.<p>ಸಹಾಯಕ ಕೃಷಿ ನಿರ್ದೇಶಕ ಡಾ.ಶ್ರೀನಿವಾಸ್, ಕೃಷಿ ಅಧಿಕಾರಿ ನೇತ್ರಾವತಿ, ತಾಂತ್ರಿಕ ಅಧಿಕಾರಿ ದೇವಪ್ಪ, ರಾಜೇಶ್, ಗಂಗುಲಪ್ಪ, ಜಲಾನಯನ ತಂಡದ ಪಾಪಿರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ: </strong>ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ಭಾನುವಾರ ನಡೆದ ಮುಖ್ಯಮಂತ್ರಿ ರೈತ ವಿದ್ಯಾಸಿರಿ ನಿಧಿ ಲೋಕಾರ್ಪಣೆ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ವ್ಯವಸ್ಥೆಯನ್ನು ತಾಲ್ಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಲ್ಲೂ ಮಾಡಲಾಗಿತ್ತು.</p>.<p>ಕಸಬಾ ಹೋಬಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕಿ ಅನುರೂಪಾ ಮಾತನಾಡಿ, ‘ರಾಜ್ಯ ಸರ್ಕಾರ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಪೋತ್ಸಾಹಿಸಲು ರೈತ ವಿದ್ಯಾನಿಧಿ ಶಿಷ್ಯವೇತನ ರೂಪಿಸಿದೆ’ ಎಂದು ತಿಳಿಸಿದರು.</p>.<p>ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಮೂಲಕ ರೈತರು ಮಾಹಿತಿ ಪಡೆದು ದಾಖಲಾತಿಗಳನ್ನು ಇಲಾಖೆಗಳಲ್ಲಿ ನೀಡಿ ಸದರಿ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಲು ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು.</p>.<p>ಸಹಾಯಕ ಕೃಷಿ ನಿರ್ದೇಶಕ ಡಾ.ಶ್ರೀನಿವಾಸ್, ಕೃಷಿ ಅಧಿಕಾರಿ ನೇತ್ರಾವತಿ, ತಾಂತ್ರಿಕ ಅಧಿಕಾರಿ ದೇವಪ್ಪ, ರಾಜೇಶ್, ಗಂಗುಲಪ್ಪ, ಜಲಾನಯನ ತಂಡದ ಪಾಪಿರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>