ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂತಾಮಣಿ: ರೈತ ವಿದ್ಯಾಸಿರಿ ನಿಧಿ ಸದ್ಬಳಕೆಗೆ ಸಲಹೆ

Last Updated 6 ಸೆಪ್ಟೆಂಬರ್ 2021, 9:01 IST
ಅಕ್ಷರ ಗಾತ್ರ

ಚಿಂತಾಮಣಿ: ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಭಾನುವಾರ ನಡೆದ ಮುಖ್ಯಮಂತ್ರಿ ರೈತ ವಿದ್ಯಾಸಿರಿ ನಿಧಿ ಲೋಕಾರ್ಪಣೆ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ವ್ಯವಸ್ಥೆಯನ್ನು ತಾಲ್ಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಲ್ಲೂ ಮಾಡಲಾಗಿತ್ತು.

ಕಸಬಾ ಹೋಬಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕಿ ಅನುರೂಪಾ ಮಾತನಾಡಿ, ‘ರಾಜ್ಯ ಸರ್ಕಾರ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಪೋತ್ಸಾಹಿಸಲು ರೈತ ವಿದ್ಯಾನಿಧಿ ಶಿಷ್ಯವೇತನ ರೂಪಿಸಿದೆ’ ಎಂದು ತಿಳಿಸಿದರು.

ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಮೂಲಕ ರೈತರು ಮಾಹಿತಿ ಪಡೆದು ದಾಖಲಾತಿಗಳನ್ನು ಇಲಾಖೆಗಳಲ್ಲಿ ನೀಡಿ ಸದರಿ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಲು ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು.

ಸಹಾಯಕ ಕೃಷಿ ನಿರ್ದೇಶಕ ಡಾ.ಶ್ರೀನಿವಾಸ್, ಕೃಷಿ ಅಧಿಕಾರಿ ನೇತ್ರಾವತಿ, ತಾಂತ್ರಿಕ ಅಧಿಕಾರಿ ದೇವಪ್ಪ, ರಾಜೇಶ್, ಗಂಗುಲಪ್ಪ, ಜಲಾನಯನ ತಂಡದ ಪಾಪಿರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT