ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಪೀಠಗಳು ಯಾವುದೇ ಪಕ್ಷ, ವ್ಯಕ್ತಿ ಪರವಾಗಿಲ್ಲ: ರಂಭಾಪುರಿ ಶ್ರೀ

Last Updated 31 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಬಾಳೆಹೊನ್ನೂರು: ವೀರಶೈವ ಧರ್ಮದ ಪಂಚಪೀಠಗಳು ರಾಜಕೀಯ ವಲಯದಿಂದ ಬಹುದೂರ ಇವೆ ಎಂದು ರಂಭಾಪುರಿ ಪೀಠದ ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ಶಿವಾಚಾರ್ಯ ಹೇಳಿದರು. ‘ರಂಭಾಪುರಿ ಬೆಳಗು’ ಮಾಸಪತ್ರಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕೆಲವರು ಆಧುನಿಕತೆ ಮತ್ತು ವೈಚಾರಿಕತೆ ಹೆಸರಿನಲ್ಲಿ ಧರ್ಮ, ಸಂಸ್ಕೃತಿಗೆ ಧಕ್ಕೆ ತರುವ ಕೆಲಸ ಮಾಡುತ್ತಿರುವುದು ದುರ್ದೈವದ ಸಂಗತಿ. ಸಂಸ್ಕೃತಿ ಸೌಹಾರ್ದ ಬೆಳೆಸಬೇಕಾದ ಕೆಲವು ಮಠಾಧೀಶರು, ಸಾಹಿತಿಗಳು ನಾಸ್ತಿಕ ಪ್ರವೃತ್ತಿ ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದು ಅಪಾಯಕಾರಿ ಬೆಳವಣಿಗೆ’ ಎಂದರು.

‘ಪಂಚಪೀಠಗಳು ಯಾವುದೇ ಪಕ್ಷ ಮತ್ತು ವ್ಯಕ್ತಿಯ ಪರವಾಗಿ ಇರದೇ ಸಮಷ್ಟಿ ಪ್ರಜ್ಞೆಯನ್ನು ಬೆಳೆಸುತ್ತಾ ಬಂದಿವೆ. ವೀರಶೈವ ಧರ್ಮದಿಂದ ಲಿಂಗಾಯತ ಸ್ವತಂತ್ರ ಧರ್ಮ ಮಾಡಲು ಹೊರಟಿರುವ ಹಿನ್ನೆಲೆಯಲ್ಲಿ ಸೈದ್ಧಾಂತಿಕ ಸಂಘರ್ಷಗಳು ನಡೆದಿರಬಹುದು. ಬಹು ಸಂಖ್ಯಾತರಾದ ವೀರಶೈವ ಲಿಂಗಾಯತ ಸಮುದಾಯವನ್ನು ಒಡೆದಾಳುವ ನೀತಿಗೆ ಕೆಲವರು ಪ್ರಯತ್ನಿಸುತ್ತಿರುವುದು ಖಂಡನೀಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT