‘ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರ ಜಾರಿಗೆ ತಂದಿರುವ ಭೂಸುಧಾರಣಾ ಕಾಯ್ದೆ, ಭೂಸ್ವಾಧೀನ ಕಾಯ್ದೆ, ಕೃಷಿ ಮಾರುಕಟ್ಟೆ ಕಾಯ್ದೆ ಮತ್ತು ಜಾನುವಾರು ಹತ್ಯೆ ಕಾಯ್ದೆಗಳನ್ನು ವಾಪಸ್ ಪಡೆಯುವವರೆಗೆ ಕರ್ನಾಟಕದಲ್ಲಿ ಹೋರಾಟವನ್ನು ಮುಂದುವರೆಸಲು ತೀರ್ಮಾನಿಸಿದ್ದೇವೆ. ಅದರಂತೆ ಜ.26ರಂದು ತುಮಕೂರು ರಸ್ತೆಯ ನೈಸ್ ಜಂಕ್ಷನ್ ನಲ್ಲಿ ರೈತರ ವಾಹನಗಳು ಒಟ್ಟುಗೂಡಿಸಿ, ಅಲ್ಲಿಂದ ಮಧ್ಯಾಹ್ನ ಸ್ವಾತಂತ್ರ್ಯ ಉದ್ಯಾನದ ತನಕ ಪರೇಡ್ ನಡೆಯಲಿದೆ. ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವರು’ ಎಂದುಹೇಳಿದರು.