ರೈತಸಂಘದ ರಾಜ್ಯ ವಿಭಾಗೀಯ ಮಟ್ಟದ ಪ್ರಧಾನ ಕಾರ್ಯದರ್ಶಿ ಯಾಕುಬ್ ಷರೀಫ್ ಮಾತನಾಡಿ, ‘ಕೃಷ್ಣಾ ನದಿ ನೀರನ್ನು ಈಗಾಗಲೇ ಜಿಲ್ಲೆಯ ಗಡಿ ಅಂಚಿನಲ್ಲಿರುವ ಆಂಧ್ರಪ್ರದೇಶದ ರೈತರು ಕೃಷಿಗೆ ಬಳಕೆ ಮಾಡುತ್ತಿದ್ದಾರೆ. ಆದರೆ, ಜಿಲ್ಲೆಗೆ ಕೃಷ್ಣಾ ನದಿ ನೀರು ತರವಲ್ಲಿ ನಮ್ಮ ಜನಪ್ರತಿನಿಧಿಗಳು ಪ್ರಯತ್ನ ಮಾಡದೇ ಸ್ವಾರ್ಥ ರಾಜಕಾರಣ ಮಾಡುತ್ತ, ಚುನಾವಣೆಗಳಲ್ಲಿ ಹಣ ಸುರಿದು ಅಧಿಕಾರಕ್ಕೆ ಬರುತ್ತಿದ್ದಾರೆ. ಅವರು ಜಿಲ್ಲೆಯ ರೈತರ ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ. ರೈತರ ಜೀವನ ಸುಧಾರಣೆ ಆಗದಿದ್ದರೆ ಮುಂದಿನ ದಿನಗಳಲ್ಲಿ ನಮ್ಮ ಸಂಘದಿಂದಲೇ ಚುನಾವಣೆಗಳನ್ನು ಎದುರಿಸಲಾಗುವುದು’ ಎಂದು ಹೇಳಿದರು. ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜೆ.ಎಸ್.ವೆಂಕಟಸ್ವಾಮಿ ಹಾಜರಿದ್ದರು.