ಗುಡಿಬಂಡೆ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಕೊರತೆಯಿಂದ ಜನರು ತತ್ತರಿಸಿದ್ದಾರೆ. ಮುಂಗಾರು ಮಳೆ ಹಾಗೂ ಇತ್ತೀಚೆಗೆ ಚಂಡಮಾರುತದ ಪರಿಣಾಮ ಸುರಿದ ಮಳೆಯಿಂದ ಕೆರೆ ಕುಂಟೆ, ಚೆಕ್ ಡ್ಯಾಂ, ಕೃಷಿ ಹೊಂಡ, ಕಲ್ಯಾಣಿಗಳಲ್ಲಿ ನೀರು ಸಂಗ್ರಹಗೊಂಡಿದೆ. ಬರಗಾಲದಿಂದ ನರಳುತ್ತಿದ್ದ ಜನ– ಜಾನುವಾರುಗಳಿಗೆ ಇದರಿಂದ ಅನುಕೂಲವಾಗಿದೆ.