ನಿರಂತರವಾಗಿ ಸುರಿದ ಮಳೆಯ ಪರಿಣಾಮವಾಗಿ ಜಮೀನಿನಲ್ಲಿ ಫಸಲಿಗೆ ಬಂದಿದ್ದ ನೆಲಗಡಲೆ, ಮುಸುಕಿನ ಜೋಳ, ರಾಗಿ ಸೇರಿದಂತೆ ಇನ್ನಿತರ ಬೆಳೆಗಳು ಕೈಗೆಟುಕದಂತಾಗಿವೆ. ಹೂಡಿದ್ದ ಬಂಡವಾಳದಲ್ಲಿ ಕನಿಷ್ಠ ಮಟ್ಟದ ಆದಾಯವನ್ನು ನಿರೀಕ್ಷೆ ಮಾಡದಂತಹ ಸ್ಥಿತಿ ನಿರ್ಮಾಣವಾಗಿತ್ತು. ಜತೆಗೆ ಹೈನುಗಾರಿಕೆ ಮೇಲೆ ಅವಲಂಬಿತವಾಗಿರುವ ರೈತಾಪಿ ವರ್ಗದವರು ಮನೆಯಲ್ಲಿನ ಜಾನುವಾರುಗಳಿಗೆ ಮೇವನ್ನು ಒದಗಿಸುವುದೇ
ದೊಡ್ಡ ಸವಾಲಾಗಿದೆ.