‘15-20 ವರ್ಷಗಳಿಂದ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರೂ ಯಾವುದೇ ಸರ್ಕಾರಿ ಸೌಲಭ್ಯ ನೀಡಿಲ್ಲ. ಬೇಡಿಕೆಗಳನ್ನು ಈಡೇರಿಸಲು ಹಂತ ಹಂತವಾಗಿ ಅನೇಕ ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಸಾಂಕೇತಿಕವಾಗಿ ಹೋರಾಟಗಳನ್ನು ಮಾಡಲಾಗಿದೆ. ಆದರೂ ಸರ್ಕಾರದಿಂದ ಯಾವುದೇ ಸಹಕಾರ, ಸ್ಪಂದನೆ ದೊರೆತಿಲ್ಲ. ಕೋವಿಡ್ ಸಮಯದಲ್ಲಿ ಮನೆ, ಮಠ, ಕುಟುಂಬಗಳನ್ನು ತೊರೆದು ಹಗಲು-ರಾತ್ರಿ ಕೆಲಸ ಮಾಡುತ್ತಿದ್ದರೂ ಸರ್ಕಾರ ನಮ್ಮ ತಾಳ್ಮೆ, ಸಹನೆಯನ್ನು ಪರೀಕ್ಷಿಸುತ್ತಿದೆ’ ಎಂದುಅಸಮಾಧಾನ ವ್ಯಕ್ತಪಡಿಸಿದರು.