<p>ಶಿಡ್ಲಘಟ್ಟ: ತಾಲ್ಲೂಕಿನಲ್ಲಿ ಕೋವಿಡ್ ಸಂಕಷ್ಟದಿಂದ ಮೃತಪಟ್ಟಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದರ ಜತೆಗೆ ನಗರದ ಪ್ರತಿ ಕುಟುಂಬಗಳಿಗೂ ದಿನಸಿ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದು ಎಬಿಡಿ ಟ್ರಸ್ಟ್ ಸಂಸ್ಥಾಪಕ ರಾಜೀವ್ ಗೌಡ ಹೇಳಿದರು.</p>.<p>ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಕಷ್ಟು ಮಂದಿ ಕೋವಿಡ್ಗೆ ತುತ್ತಾಗಿ ಸಂಕಷ್ಟ ಎದುರಿಸುತ್ತಿರುವುದಾಗಿ ಹೇಳಿ ಕೊಂಡಾಗ ಅಂತವರ ನೆರವಿಗೆ ಧಾವಿಸಬೇಕಾಗಿರುವುದು ನಮ್ಮ ಧರ್ಮ. ಅವರಿಗೆ ಸಹಾಯ ಮಾಡಲು ಮುಂದಾಗಿದ್ದೇವೆ ಎಂದರು.</p>.<p>ತಾಲ್ಲೂಕು ಅಭಿವೃದ್ಧಿಯಿಂದ ಸಾಕಷ್ಟು ಹಿಂದುಳಿದಿದೆ. ಕುಡಿಯುವ ನೀರಿನ ಸಮಸ್ಯೆಯಿಂದ ಹಿಡಿದು, ಸಾಕಷ್ಟು ಸಮಸ್ಯೆಗಳಿಗೆ ಪರಿಹಾರವನ್ನು ಕಂಡು ಹಿಡಿಯಬೇಕಾಗಿರುವ ನಿಟ್ಟಿನಲ್ಲಿ ನಮ್ಮ ಟ್ರಸ್ಟ್ ವತಿಯಿಂದ ಸಾಮಾಜಿಕ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.</p>.<p>ತಾಲ್ಲೂಕಿನಲ್ಲಿ 50 ಸಾವಿರ ಕಿಟ್ಗಳನ್ನು ಮಾಡಿಸಿ ಹಂಚಿಕೆ ಮಾಡುವ ಕೆಲಸ ಮಾಡುತ್ತಿದ್ದೇವೆ. ದೇವಾಲಯಗಳ ಜೀರ್ಣೋದ್ಧಾರ, ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದೇವೆ ಎಂದರು.</p>.<p>ವೈದ್ಯಕೀಯ ಸಮಸ್ಯೆ ಇರುವವರು, ಆಸ್ಪತ್ರೆಗಳಲ್ಲಿ ಬಿಲ್ ಕಟ್ಟಲು ಸಾಧ್ಯವಾಗದವರು, ನಮ್ಮನ್ನು ಸಂಪರ್ಕ ಮಾಡಿದರೆ ಸಹಾಯ ಮಾಡಲಿದ್ದೇವೆ. ಆಂಬುಲೆನ್ಸ್ಗಳನ್ನು ಜನರ ಉಪಯೋಗಕ್ಕೆ ಕೊಡುಗೆಯಾಗಿ ಕೊಡಲು ಸಿದ್ಧತೆ ಮಾಡಿಕೊಂಡಿದ್ದೇವೆ. ತಲಕಾಯಲಬೆಟ್ಟ, ಜಂಗಮಕೋಟೆ ಹಾಗೂ ಸುಗಟೂರಿನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ ಎಂದರು.</p>.<p>ಎಬಿಡಿ ಟ್ರಸ್ಟ್ ಸದಸ್ಯ ಶ್ರೀನಿವಾಸ್ ಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ತಾಲ್ಲೂಕಿನಲ್ಲಿ ಕೋವಿಡ್ ಸಂಕಷ್ಟದಿಂದ ಮೃತಪಟ್ಟಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದರ ಜತೆಗೆ ನಗರದ ಪ್ರತಿ ಕುಟುಂಬಗಳಿಗೂ ದಿನಸಿ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದು ಎಬಿಡಿ ಟ್ರಸ್ಟ್ ಸಂಸ್ಥಾಪಕ ರಾಜೀವ್ ಗೌಡ ಹೇಳಿದರು.</p>.<p>ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಕಷ್ಟು ಮಂದಿ ಕೋವಿಡ್ಗೆ ತುತ್ತಾಗಿ ಸಂಕಷ್ಟ ಎದುರಿಸುತ್ತಿರುವುದಾಗಿ ಹೇಳಿ ಕೊಂಡಾಗ ಅಂತವರ ನೆರವಿಗೆ ಧಾವಿಸಬೇಕಾಗಿರುವುದು ನಮ್ಮ ಧರ್ಮ. ಅವರಿಗೆ ಸಹಾಯ ಮಾಡಲು ಮುಂದಾಗಿದ್ದೇವೆ ಎಂದರು.</p>.<p>ತಾಲ್ಲೂಕು ಅಭಿವೃದ್ಧಿಯಿಂದ ಸಾಕಷ್ಟು ಹಿಂದುಳಿದಿದೆ. ಕುಡಿಯುವ ನೀರಿನ ಸಮಸ್ಯೆಯಿಂದ ಹಿಡಿದು, ಸಾಕಷ್ಟು ಸಮಸ್ಯೆಗಳಿಗೆ ಪರಿಹಾರವನ್ನು ಕಂಡು ಹಿಡಿಯಬೇಕಾಗಿರುವ ನಿಟ್ಟಿನಲ್ಲಿ ನಮ್ಮ ಟ್ರಸ್ಟ್ ವತಿಯಿಂದ ಸಾಮಾಜಿಕ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.</p>.<p>ತಾಲ್ಲೂಕಿನಲ್ಲಿ 50 ಸಾವಿರ ಕಿಟ್ಗಳನ್ನು ಮಾಡಿಸಿ ಹಂಚಿಕೆ ಮಾಡುವ ಕೆಲಸ ಮಾಡುತ್ತಿದ್ದೇವೆ. ದೇವಾಲಯಗಳ ಜೀರ್ಣೋದ್ಧಾರ, ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದೇವೆ ಎಂದರು.</p>.<p>ವೈದ್ಯಕೀಯ ಸಮಸ್ಯೆ ಇರುವವರು, ಆಸ್ಪತ್ರೆಗಳಲ್ಲಿ ಬಿಲ್ ಕಟ್ಟಲು ಸಾಧ್ಯವಾಗದವರು, ನಮ್ಮನ್ನು ಸಂಪರ್ಕ ಮಾಡಿದರೆ ಸಹಾಯ ಮಾಡಲಿದ್ದೇವೆ. ಆಂಬುಲೆನ್ಸ್ಗಳನ್ನು ಜನರ ಉಪಯೋಗಕ್ಕೆ ಕೊಡುಗೆಯಾಗಿ ಕೊಡಲು ಸಿದ್ಧತೆ ಮಾಡಿಕೊಂಡಿದ್ದೇವೆ. ತಲಕಾಯಲಬೆಟ್ಟ, ಜಂಗಮಕೋಟೆ ಹಾಗೂ ಸುಗಟೂರಿನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ ಎಂದರು.</p>.<p>ಎಬಿಡಿ ಟ್ರಸ್ಟ್ ಸದಸ್ಯ ಶ್ರೀನಿವಾಸ್ ಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>