ದೇವಿಕುಂಟೆ ಗ್ರಾಮದ ಗೋಪಾಲ್ ಎಂಬ ರೈತ ಭತ್ತದ ಗದ್ದೆ ಪಕ್ಕದಲ್ಲಿ ಅರಣ್ಯ ಪ್ರದೇಶ ಇದೆ. ಬುಧವಾರ ಕೆಲ ಕಿಡಿಗೇಡಿಗಳು ಒಣಹುಲ್ಲಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿಯ ಕಿಡಿಗಳು ಭತ್ತದ ಗದ್ದೆಗೆ ಹರಡುತ್ತದೆ ಎಂದು, ರೈತ ಗೋಪಾಲ್ ಬೆಂಕಿಯನ್ನು ನೀರಿನಿಂದ ಹಾರಿಸಿದರೂ ಪ್ರಯೋಜವಾಗಿಲ್ಲ. ಮೊಳಕಾಲುದ್ದ ಬೆಳೆದಿರುವ ಈ ಹುಲ್ಲಿನ ನಡುವೆ ಹುಳು ಹುಪ್ಪಟಗಳು,ಕಪ್ಪೆಗಳು, ಹಾವುಗಳು, ಓತಿಕೇತ, ಮಿಡತೆಗಳು, ಚಿಟ್ಟೆಗಳು ಸುಂದರ ಸಂಸಾರ ಹೂಡಿವೆ. ನೆಲದೊಳಗೆ ಇರುವೆಗಳು, ಗೆದ್ದಲು ಗೂಡು ಕಟ್ಟಿದೆ. ಎರೆ ಹುಳಗಳು ನೆಲವೆಲ್ಲಾ ನನ್ನದೇ ಎಂದು ತಿರುಗಾಡುತ್ತಿವೆ. ಆದರೆ ಕಾಡ್ಕಿಚ್ಚು ಹರಡಿ ಅಪಾರ ಪ್ರಮಾಣದ ಹುಲ್ಲು ನಾಶ ಆಗಿದೆ.