ಶಿಡ್ಲಘಟ್ಟ: ನೀಲಗಿರಿ ತೋಪಿಗೆ ಬೆಂಕಿ

ಶಿಡ್ಲಘಟ್ಟ: ತಾಲ್ಲೂಕಿನ ಸೊಣ್ಣೇನಹಳ್ಳಿಯ ಚೇತನ್ ಅವರಿಗೆ ಸೇರಿರುವ ನೀಲಗಿರಿ ತೋಪಿಗೆ ಸೋಮವಾರ ಬೆಂಕಿ ಬಿದ್ದಿದ್ದು, ಅಗ್ನಿಶಾಮಕ ದಳದವರು ನಂದಿಸಿದ್ದಾರೆ.
ಆರು ಎಕರೆ ನೀಲಗಿರಿ ತೋಪಿನಲ್ಲಿ ಒಂದೂವರೆ ಎಕರೆಯಷ್ಟು ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳದವರು ಸಮಯಕ್ಕೆ
ಬಂದು ನೀರು, ಹೊಂಗೆಸೊಪ್ಪು ಮತ್ತು ನೀಲಗಿರಿ ಸೊಪ್ಪಿನಿಂದ ಬೆಂಕಿ ನಂದಿಸಿದರು. ಸೊಣ್ಣೇನಹಳ್ಳಿ ಗ್ರಾಮಸ್ಥರೂ ಸಹ ಬೆಂಕಿ ನಂದಿಸಲು ನೆರವಾಗಿದ್ದಾರೆ.
ಅಗ್ನಿಶಾಮಕ ದಳ ಠಾಣಾಧಿಕಾರಿ ಕೆ.ರಾಮಕೃಷ್ಣ, ಅಧಿಕಾರಿಗಳಾದ ಪಿ.ಆರ್.ಶ್ರೀನಿವಾಸ್, ಅಶೋಕ್, ಮಹಂತೇಶ್ ಹಾಜರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.