ಸಾಮಾನ್ಯವಾಗಿ ಬೇಸಿಗೆಯಲ್ಲಿ ಬೆಟ್ಟ, ಗುಡ್ಡ, ಕಾಡುಗಳಿಗೆ ಬೆಂಕಿ ಬೀಳುವುದು ಸಾಮಾನ್ಯ. ಆದರೆ, ಚಳಿಗಾಲದಲ್ಲೇ ಬೆಟ್ಟದ ಗಿಡ, ಮರಗಳು ಬೆಂಕಿಗೆ ಆಹುತಿಯಾಗುತ್ತಿರುವುದು ಆತಂಕದ ಸಂಗತಿ. ಸಾಲು ಮರದ ತಿಮ್ಮಕ್ಕ ವೃಕ್ಷೊದ್ಯಾನದಲ್ಲಿ ಯಾವುದೇ ಕಾವಲು ವ್ಯವಸ್ಥೆ ಇಲ್ಲದಿರುವುದು ಕಿಡಿಗೇಡಿಗಳಿಗೆ ಅವಕಾಶವಾಗಿದೆ. ಕಾವಲು ವ್ಯವಸ್ಥೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.