ಅಡುಗೆ ಅನಿಲದ ಬೆಲೆ ಹೆಚ್ಚುತ್ತಲೇ ಸಾಗುತ್ತಿರುವುದರಿಂದ ಮಧ್ಯಮ ಮತ್ತು ಬಡ ವರ್ಗದ ಮಹಿಳೆಯರು ಪ್ರತಿನಿತ್ಯ ಅಡುಗೆ ತಯಾರಿಸಲು ಕಟ್ಟಿಗೆ, ಸಗಣಿಯ ಭರಣಿ (ಕುಳ್ಳು), ಮೆಕ್ಕೆಜೋಳದ ಬೆಂಡು, ಕಟ್ಟಿಗೆಗೆ ಮೊರೆ ಹೋಗಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ. ಯೋಜನೆ ಆರಂಭದಲ್ಲಿ ₹500 ಇದ್ದ ಒಂದು ಅಡುಗೆ ಸಿಲಿಂಡರ್ ದರ, ಈಗ ಸಾವಿರದ ಗಡಿ ಮುಟ್ಟಿದೆ. ಗ್ಯಾಸ್ ವಿತರಕರೊಬ್ಬರ ಪ್ರಕಾರ ತಾಲೂಕಿನಲ್ಲಿ ಶೇ 30ರಷ್ಟು ಫಲಾನುಭವಿಗಳು ಖಾಲಿಯಾದ ನಂತರ ಮತ್ತೆ ಗ್ಯಾಸ್ ಸಿಲಿಂಡರ್ ಕೊಳ್ಳದಿರುವುದು ಕಂಡುಬಂದಿದೆ.