ಕೋಟಾಲದಿನ್ನೆಯ ಫೈರೋಜ್ ಹಾಗೂ ಫಾಮೀದಾ ದಂಪತಿ ಪುತ್ರ ಸಮೀರ್ಗೆ ಅ.30ರಂದು ನಾಯಿ ಕಚ್ಚಿತ್ತು. ಪೋಷಕರು ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚುಚ್ಚುಮದ್ದು ಕೊಡಿಸಿದ್ದರು. ಐದು ದಿನಗಳ ನಂತರ ಬಾಲಕನಿಗೆತೀವ್ರ ಜ್ವರ ಕಾಣಿಸಿಕೊಂಡಿದ್ದು ಗೌರಿಬಿದನೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಇದೇ ಭಾನುವಾರ (ನ.13ರಂದು) ಮೃತಪಟ್ಟಿದ್ದಾನೆ.