<p><strong>ಶಿಡ್ಲಘಟ್ಟ:</strong> ತಾಲ್ಲೂಕಿನ ಸಾದಲಿ ಬಳಿಯ ರಾಮಸಮುದ್ರ ಕೆರೆ ತುಂಬಿ ಕೋಡಿ ಹರಿಯುತ್ತಿದ್ದು, ಕೋಡಿ ಹರಿವ ಭಾಗದಲ್ಲಿ ಸ್ಥಳೀಯರ ಸಂಚಾರಕ್ಕೆ ಅಡ್ಡಿಯಾದ ಸ್ಥಳಕ್ಕೆ ಶಾಸಕ ಬಿ.ಎನ್.ರವಿಕುಮಾರ್ ಅವರು ಅಧಿಕಾರಿಗಳೊಂದಿಗೆ ಬುಧವಾರ ಭೇಟಿನೀಡಿ ಸ್ಥಳೀಯರ ಸಮಸ್ಯೆ ಆಲಿಸಿದರು.</p>.<p>ಈ ಭಾಗದ ರಸ್ತೆಯಲ್ಲಿ ನೀರು ತುಂಬಿ ಸುತ್ತಮುತ್ತಲ ಗದ್ದೆ, ತೋಟಗಳಿಗೆ ತೆರಳಲು ಅಡ್ಡಿಯಾಗಿದೆ. ಇದರಿಂದ ಕೃಷಿ ಹೈನುಗಾರಿಕೆ ಚಟುವಟಿಕೆಗಳಿಗೆ ಅಡ್ಡಿಯಾಗಿದೆ ಎಂದು ಸ್ಥಳೀಯರು ಅವಲತ್ತುಕೊಂಡರು.</p>.<p>ಕೋಡಿ ಹರಿಯುವ ನೀರು ವ್ಯರ್ಥವಾಗಿ ಆಂಧ್ರದ ಕಡೆ ಹರಿಯುತ್ತದೆ ಎಂದು ಮಾಹಿತಿ ನೀಡಿ ಹರಿಯುವ ನೀರನ್ನು ತಡೆಯುವಂತೆ ಮನವಿ ಮಾಡಿದರು.</p>.<p>ಈ ಬಗ್ಗೆ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಅಕ್ಟೋಬರ್ 24ರಂದು ವರದಿ ಪ್ರಕಟವಾಗಿತ್ತು. ಸ್ಥಳೀಯವಾಗಿ ಸಂಚಾರಕ್ಕೆ ಅಡ್ಡಿಯಾಗದಂತೆ ಈ ಭಾಗದಲ್ಲಿ ಹರಿಯುವ ನೀರಿನ ಕಾಲುವೆಗೆ ತಡೆಯಾಗಿ ಮೋರಿ ನಿರ್ಮಿಸಲು ಸಾಧ್ಯವೇ ಎಂದು ಪರಿಶೀಲಿಸಿ ಸೇತುವೆ ನಿರ್ಮಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಾದಲಿ ಕ್ರಾಸ್ನಿಂದ ಎಸ್.ದೇವಗಾನಹಳ್ಳಿವರೆಗೂ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ದೂಳು ಆವರಿಸಿ ರಸ್ತೆ ಅಕ್ಕಪಕ್ಕದ ಗದ್ದೆ, ತೋಟಗಳ ಬೆಳೆ ಹಾಳಾಗುತ್ತಿದೆ. ಪ್ರಯಾಣಿಕರಿಗೂ ತೊಂದರೆ ಆಗುತ್ತಿದೆ ಎಂದು ಸಾರ್ವಜನಿಕರು ದೂರಿದರು.</p>.<p>ರಸ್ತೆ ಕಾಮಗಾರಿ ವೇಳೆ ದೂಳಿನಿಂದ ತೊಂದರೆ ಆಗದಂತೆ ಕ್ರಮವಹಿಸಲು ಸಂಬಂಧಿಸಿದ ಕಾಮಗಾರಿ ಗುತ್ತಿಗೆದಾರರಿಗೆ ಸೂಚಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.</p>.<p>ಸಾದಲಿ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಹಾಗೂ ಅಲ್ಲಿಗೆ ಸಮೀಪ ಸರ್ಕಾರದಿಂದ ನೀಡಿರುವ ನಿವೇಶನಗಳ ಜಾಗದಲ್ಲಿ ವಿದ್ಯುತ್ ಸಂಪರ್ಕ ಸರಿಯಾಗಿ ಇಲ್ಲದ ಕಾರಣ ತೊಂದರೆ ಆಗುತ್ತಿದೆ ಎಂದು ಸ್ಥಳೀಯರು ಸಮಸ್ಯೆ ಹೇಳಿಕೊಂಡರು.</p>.<p>ತಾದೂರು ರಘು, ತ್ಯಾಗರಾಜ್, ಆವುಲರೆಡ್ಡಿ, ಗಂಗಾಧರ್, ಆಂಜಿನಪ್ಪ, ಲೋಕೋಪಯೋಗಿ ಇಲಾಖೆ ಹಾಗೂ ಸಣ್ಣ ನೀರಾವರಿ, ಬೆಸ್ಕಾಂ, ಕಂದಾಯ ಇಲಾಖೆ ಅಧಿಕಾರಿಗಳು, ಸ್ಥಳೀಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ತಾಲ್ಲೂಕಿನ ಸಾದಲಿ ಬಳಿಯ ರಾಮಸಮುದ್ರ ಕೆರೆ ತುಂಬಿ ಕೋಡಿ ಹರಿಯುತ್ತಿದ್ದು, ಕೋಡಿ ಹರಿವ ಭಾಗದಲ್ಲಿ ಸ್ಥಳೀಯರ ಸಂಚಾರಕ್ಕೆ ಅಡ್ಡಿಯಾದ ಸ್ಥಳಕ್ಕೆ ಶಾಸಕ ಬಿ.ಎನ್.ರವಿಕುಮಾರ್ ಅವರು ಅಧಿಕಾರಿಗಳೊಂದಿಗೆ ಬುಧವಾರ ಭೇಟಿನೀಡಿ ಸ್ಥಳೀಯರ ಸಮಸ್ಯೆ ಆಲಿಸಿದರು.</p>.<p>ಈ ಭಾಗದ ರಸ್ತೆಯಲ್ಲಿ ನೀರು ತುಂಬಿ ಸುತ್ತಮುತ್ತಲ ಗದ್ದೆ, ತೋಟಗಳಿಗೆ ತೆರಳಲು ಅಡ್ಡಿಯಾಗಿದೆ. ಇದರಿಂದ ಕೃಷಿ ಹೈನುಗಾರಿಕೆ ಚಟುವಟಿಕೆಗಳಿಗೆ ಅಡ್ಡಿಯಾಗಿದೆ ಎಂದು ಸ್ಥಳೀಯರು ಅವಲತ್ತುಕೊಂಡರು.</p>.<p>ಕೋಡಿ ಹರಿಯುವ ನೀರು ವ್ಯರ್ಥವಾಗಿ ಆಂಧ್ರದ ಕಡೆ ಹರಿಯುತ್ತದೆ ಎಂದು ಮಾಹಿತಿ ನೀಡಿ ಹರಿಯುವ ನೀರನ್ನು ತಡೆಯುವಂತೆ ಮನವಿ ಮಾಡಿದರು.</p>.<p>ಈ ಬಗ್ಗೆ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಅಕ್ಟೋಬರ್ 24ರಂದು ವರದಿ ಪ್ರಕಟವಾಗಿತ್ತು. ಸ್ಥಳೀಯವಾಗಿ ಸಂಚಾರಕ್ಕೆ ಅಡ್ಡಿಯಾಗದಂತೆ ಈ ಭಾಗದಲ್ಲಿ ಹರಿಯುವ ನೀರಿನ ಕಾಲುವೆಗೆ ತಡೆಯಾಗಿ ಮೋರಿ ನಿರ್ಮಿಸಲು ಸಾಧ್ಯವೇ ಎಂದು ಪರಿಶೀಲಿಸಿ ಸೇತುವೆ ನಿರ್ಮಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಾದಲಿ ಕ್ರಾಸ್ನಿಂದ ಎಸ್.ದೇವಗಾನಹಳ್ಳಿವರೆಗೂ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ದೂಳು ಆವರಿಸಿ ರಸ್ತೆ ಅಕ್ಕಪಕ್ಕದ ಗದ್ದೆ, ತೋಟಗಳ ಬೆಳೆ ಹಾಳಾಗುತ್ತಿದೆ. ಪ್ರಯಾಣಿಕರಿಗೂ ತೊಂದರೆ ಆಗುತ್ತಿದೆ ಎಂದು ಸಾರ್ವಜನಿಕರು ದೂರಿದರು.</p>.<p>ರಸ್ತೆ ಕಾಮಗಾರಿ ವೇಳೆ ದೂಳಿನಿಂದ ತೊಂದರೆ ಆಗದಂತೆ ಕ್ರಮವಹಿಸಲು ಸಂಬಂಧಿಸಿದ ಕಾಮಗಾರಿ ಗುತ್ತಿಗೆದಾರರಿಗೆ ಸೂಚಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.</p>.<p>ಸಾದಲಿ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಹಾಗೂ ಅಲ್ಲಿಗೆ ಸಮೀಪ ಸರ್ಕಾರದಿಂದ ನೀಡಿರುವ ನಿವೇಶನಗಳ ಜಾಗದಲ್ಲಿ ವಿದ್ಯುತ್ ಸಂಪರ್ಕ ಸರಿಯಾಗಿ ಇಲ್ಲದ ಕಾರಣ ತೊಂದರೆ ಆಗುತ್ತಿದೆ ಎಂದು ಸ್ಥಳೀಯರು ಸಮಸ್ಯೆ ಹೇಳಿಕೊಂಡರು.</p>.<p>ತಾದೂರು ರಘು, ತ್ಯಾಗರಾಜ್, ಆವುಲರೆಡ್ಡಿ, ಗಂಗಾಧರ್, ಆಂಜಿನಪ್ಪ, ಲೋಕೋಪಯೋಗಿ ಇಲಾಖೆ ಹಾಗೂ ಸಣ್ಣ ನೀರಾವರಿ, ಬೆಸ್ಕಾಂ, ಕಂದಾಯ ಇಲಾಖೆ ಅಧಿಕಾರಿಗಳು, ಸ್ಥಳೀಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>