ಹೂ ವ್ಯಾಪಾರಿಗಳ ಸಂಘದ ಅಧ್ಯಕ್ಷ ರವೀಂದ್ರ ಮಾತನಾಡಿ, ಎರಡು ವರ್ಷಗಳಿಂದ ತಾತ್ಕಾಲಿಕ ಮಾರುಕಟ್ಟೆಯಲ್ಲಿ ವಹಿವಾಟು ನಡೆಸುತ್ತಿದ್ದೇವೆ. ಇಲ್ಲಿ ಸಮಸ್ಯೆಗಳು ಹೆಚ್ಚಿವೆ. ಎಪಿಎಂಸಿ ಅಧ್ಯಕ್ಷರಿಗೆ, ಜಿಲ್ಲಾಧಿಕಾರಿ ಅವರಿಗೆ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಎಪಿಎಂಸಿಯಲ್ಲಿಯೇ ವಹಿವಾಟು ನಡೆಸುತ್ತೇವೆ. ಹೊಸ ಮಾರುಕಟ್ಟೆಯನ್ನು ನೀವು ನಿರ್ಮಿಸಿಕೊಡುವವರೆಗೂ ಎಪಿಎಂಸಿಯಲ್ಲಿ ಅವಕಾಶ ನೀಡಿ ಎಂದರು.