<p><strong>ಚೇಳೂರು:</strong> ತಾಲ್ಲೂಕಿನಾದ್ಯಂತ ಚೇಳೂರು ಪಟ್ಟಣ ಸೇರಿದಂತೆ, ಚಾಕವೇಲು, ಚಿಲಕಲನೇರ್ಪು, ನಲ್ಲಗುಟ್ಲಪಲ್ಲಿ, ಏನಿಗದಲೆ, ಬುರುಡಗುಂಟೆ ಮತ್ತು ಸೋಮನಾಥಪುರಗಳಲ್ಲಿರುವ ಬೇಕರಿಗಳು, ಹೋಟೆಲ್ಗಳು ಹಾಗೂ ಕಬಾಬ್ ಅಂಗಡಿಗಳು ಬಣ್ಣ ಬಣ್ಣದ ಆಹಾರ ಪದಾರ್ಥಗಳ ಮೂಲಕ ಸಾರ್ವಜನಿಕರ ಆರೋಗ್ಯದೊಂದಿಗೆ ಅಪಾಯಕಾರಿ ಆಟವಾಡುತ್ತಿರುವ ಗಂಭೀರ ಆರೋಪಗಳು ಕೇಳಿಬಂದಿವೆ.</p>.<p>ಆಹಾರ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ, ನಿಷಿದ್ಧ ಕೃತಕ ಬಣ್ಣ ಯಥೇಚ್ಛವಾಗಿ ಬಳಸಲಾಗುತ್ತಿದ್ದರೂ, ಆಹಾರ ಸುರಕ್ಷತಾ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗದಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಸರ್ಕಾರವು ಸ್ಪಷ್ಟವಾಗಿ ಆಹಾರ ಪದಾರ್ಥಗಳಿಗೆ ಬಣ್ಣ ಬೆರಕೆ ಮಾಡುವುದನ್ನು ನಿಷೇಧಿಸಿದೆ. ಆದಾಗ್ಯೂ, ತಾಲ್ಲೂಕಿನಾದ್ಯಂತ ವ್ಯಾಪಾರಿಗಳು, ಮುಖ್ಯ ರಸ್ತೆಗಳ ಪಕ್ಕದಲ್ಲೇ ತಮ್ಮ ಆಹಾರ ಪದಾರ್ಥಗಳನ್ನು ಸಾರ್ವಜನಿಕರಿಗೆ ಆಕರ್ಷಕವಾಗಿ ಕಾಣುವಂತೆ ಮಾಡಲು ಹೆಚ್ಚುವರಿ ಬಣ್ಣಗಳನ್ನು ಬಳಸುತ್ತಿದ್ದಾರೆ.</p>.<p>ಸ್ಥಳೀಯ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಇವರ ವಿರುದ್ಧ ಕಾನೂನು ಕ್ರಮ ಜರುಗಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಹಲವು ಬೇಕರಿಗಳು ಮತ್ತು ಹೋಟೆಲ್ಗಳು ಕಡ್ಡಾಯವಾಗಿ ಪಡೆಯಬೇಕಾದ ಆಹಾರ ಮಾರಾಟ ಪರವಾನಗಿಯನ್ನು ಪಡೆದಿಲ್ಲ.</p>.<p>ವಾಣಿಜ್ಯ ಉದ್ದೇಶಗಳಿಗೆ ಬಳಸಬೇಕಾದ ಸಿಲಿಂಡರ್ ಬದಲಿಗೆ, ಹೆಚ್ಚು ಸಬ್ಸಿಡಿ ಇರುವ ಗೃಹ ಬಳಕೆಯ ಸಿಲಿಂಡರ್ಗಳನ್ನು ಆಹಾರ ತಯಾರಿಕೆಗೆ ಬಳಸಲಾಗುತ್ತಿದೆ. </p>.<p>ಆಹಾರ ಸುರಕ್ಷತಾ ಅಧಿಕಾರಿಗಳ ನಡೆ ತಾಲ್ಲೂಕಿನ ನಾಗರಿಕಲ್ಲಿ ಹಲವು ಅನುಮಾನಗಳಿಗೂ ಕಾರಣವಾಗಿದೆ. ಕಲಬೆರಕೆ ನಡೆಯುತ್ತಿದ್ದರೂ ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸುವರು.</p>.<p>ಆಹಾರ ಸುರಕ್ಷತೆ ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗುತ್ತಿರುವಾಗಲೂ, ಸರ್ಕಾರದ ಆದೇಶಗಳನ್ನು ಪಾಲಿಸಬೇಕಾದ ಅಧಿಕಾರಿ ವರ್ಗವೇ ಭ್ರಷ್ಟಾಚಾರದಲ್ಲಿ ಮುಳುಗಿದೆಯೇ ಎಂಬ ಪ್ರಶ್ನೆ ಎದುರಾಗಿದೆ. </p>.<p>ಚೇಳೂರು ತಾಲ್ಲೂಕಿನ ಅನಧಿಕೃತ ಆಹಾರ ಮಳಿಗೆಗಳ ಮೇಲೆ ಸಮಗ್ರ ದಾಳಿ ನಡೆಸಿ, ನಿಷಿದ್ಧ ವಸ್ತುಗಳ ಬಳಕೆಗೆ ಕಡಿವಾಣ ಹಾಕಿ, ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೇಳೂರು:</strong> ತಾಲ್ಲೂಕಿನಾದ್ಯಂತ ಚೇಳೂರು ಪಟ್ಟಣ ಸೇರಿದಂತೆ, ಚಾಕವೇಲು, ಚಿಲಕಲನೇರ್ಪು, ನಲ್ಲಗುಟ್ಲಪಲ್ಲಿ, ಏನಿಗದಲೆ, ಬುರುಡಗುಂಟೆ ಮತ್ತು ಸೋಮನಾಥಪುರಗಳಲ್ಲಿರುವ ಬೇಕರಿಗಳು, ಹೋಟೆಲ್ಗಳು ಹಾಗೂ ಕಬಾಬ್ ಅಂಗಡಿಗಳು ಬಣ್ಣ ಬಣ್ಣದ ಆಹಾರ ಪದಾರ್ಥಗಳ ಮೂಲಕ ಸಾರ್ವಜನಿಕರ ಆರೋಗ್ಯದೊಂದಿಗೆ ಅಪಾಯಕಾರಿ ಆಟವಾಡುತ್ತಿರುವ ಗಂಭೀರ ಆರೋಪಗಳು ಕೇಳಿಬಂದಿವೆ.</p>.<p>ಆಹಾರ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ, ನಿಷಿದ್ಧ ಕೃತಕ ಬಣ್ಣ ಯಥೇಚ್ಛವಾಗಿ ಬಳಸಲಾಗುತ್ತಿದ್ದರೂ, ಆಹಾರ ಸುರಕ್ಷತಾ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗದಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಸರ್ಕಾರವು ಸ್ಪಷ್ಟವಾಗಿ ಆಹಾರ ಪದಾರ್ಥಗಳಿಗೆ ಬಣ್ಣ ಬೆರಕೆ ಮಾಡುವುದನ್ನು ನಿಷೇಧಿಸಿದೆ. ಆದಾಗ್ಯೂ, ತಾಲ್ಲೂಕಿನಾದ್ಯಂತ ವ್ಯಾಪಾರಿಗಳು, ಮುಖ್ಯ ರಸ್ತೆಗಳ ಪಕ್ಕದಲ್ಲೇ ತಮ್ಮ ಆಹಾರ ಪದಾರ್ಥಗಳನ್ನು ಸಾರ್ವಜನಿಕರಿಗೆ ಆಕರ್ಷಕವಾಗಿ ಕಾಣುವಂತೆ ಮಾಡಲು ಹೆಚ್ಚುವರಿ ಬಣ್ಣಗಳನ್ನು ಬಳಸುತ್ತಿದ್ದಾರೆ.</p>.<p>ಸ್ಥಳೀಯ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಇವರ ವಿರುದ್ಧ ಕಾನೂನು ಕ್ರಮ ಜರುಗಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಹಲವು ಬೇಕರಿಗಳು ಮತ್ತು ಹೋಟೆಲ್ಗಳು ಕಡ್ಡಾಯವಾಗಿ ಪಡೆಯಬೇಕಾದ ಆಹಾರ ಮಾರಾಟ ಪರವಾನಗಿಯನ್ನು ಪಡೆದಿಲ್ಲ.</p>.<p>ವಾಣಿಜ್ಯ ಉದ್ದೇಶಗಳಿಗೆ ಬಳಸಬೇಕಾದ ಸಿಲಿಂಡರ್ ಬದಲಿಗೆ, ಹೆಚ್ಚು ಸಬ್ಸಿಡಿ ಇರುವ ಗೃಹ ಬಳಕೆಯ ಸಿಲಿಂಡರ್ಗಳನ್ನು ಆಹಾರ ತಯಾರಿಕೆಗೆ ಬಳಸಲಾಗುತ್ತಿದೆ. </p>.<p>ಆಹಾರ ಸುರಕ್ಷತಾ ಅಧಿಕಾರಿಗಳ ನಡೆ ತಾಲ್ಲೂಕಿನ ನಾಗರಿಕಲ್ಲಿ ಹಲವು ಅನುಮಾನಗಳಿಗೂ ಕಾರಣವಾಗಿದೆ. ಕಲಬೆರಕೆ ನಡೆಯುತ್ತಿದ್ದರೂ ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸುವರು.</p>.<p>ಆಹಾರ ಸುರಕ್ಷತೆ ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗುತ್ತಿರುವಾಗಲೂ, ಸರ್ಕಾರದ ಆದೇಶಗಳನ್ನು ಪಾಲಿಸಬೇಕಾದ ಅಧಿಕಾರಿ ವರ್ಗವೇ ಭ್ರಷ್ಟಾಚಾರದಲ್ಲಿ ಮುಳುಗಿದೆಯೇ ಎಂಬ ಪ್ರಶ್ನೆ ಎದುರಾಗಿದೆ. </p>.<p>ಚೇಳೂರು ತಾಲ್ಲೂಕಿನ ಅನಧಿಕೃತ ಆಹಾರ ಮಳಿಗೆಗಳ ಮೇಲೆ ಸಮಗ್ರ ದಾಳಿ ನಡೆಸಿ, ನಿಷಿದ್ಧ ವಸ್ತುಗಳ ಬಳಕೆಗೆ ಕಡಿವಾಣ ಹಾಕಿ, ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>