<p><strong>ಚಿಂತಾಮಣಿ:</strong> ಮರಗಳ ಕಟಾವು ಮಾಡಲು ಅನುಮತಿಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಉಪ ವಲಯದ ಸಹಾಯಕ ಅರಣ್ಯಾಧಿಕಾರಿ ಧನಲಕ್ಷ್ಮಿ ಮತ್ತು ಜೀಪ್ ಚಾಲಕ ಮಣಿಕಂಠ ಶುಕ್ರವಾರ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.</p>.<p>ತಾಲ್ಲೂಕಿನ ದೊಡ್ಡಗಂಜೂರು ಬಳಿಯ ಪೆಟ್ರೋಲ್ ಬಂಕ್ ಜಾಗದಲ್ಲಿದ್ದ ಮರಗಳನ್ನು ಕಟಾವು ಮಾಡಲು ಗ್ರಾಮದ ರೈತ ಶ್ರೀನಾಥ್ ಎಂಬುವವರು ಉಪವಲಯ ಅರಣ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದರು. ಮರ ಕಟಾವು ಮಾಡಲು ಮೌಖಿಕವಾಗಿ ಅನುಮತಿ ನೀಡಿದ್ದರು ಎಂದು ತಿಳಿದು ಬಂದಿದೆ.</p>.<p>ಅನುಮತಿ ಪಡೆಯುವುದಕ್ಕಿಂತ ಮೊದಲೇ ಮರ ಕಟಾವು ಮಾಡಲಾಗಿದೆ ಎಂದು ಜಮೀನಿನ ಮಾಲೀಕ ಶ್ರೀನಾಥ್ ಅವರನ್ನು ಧನಲಕ್ಷ್ಮಿ ತರಾಟೆಗೆ ತೆಗೆದುಕೊಂಡಿದ್ದರು.</p>.<p>ನಂತರ ಅರಣ್ಯ ಇಲಾಖೆ ಜೀಪ್ ಚಾಲಕ ಮಣಿಕಂಠ ಮೂಲಕ ಮಾತುಕತೆ ನಡೆದು ₹50 ಸಾವಿರ ಲಂಚಕ್ಕೆ ಒತ್ತಾಯಿಸಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ಲೋಕಾಯುಕ್ತರಿಗೆ ದೂರು ನೀಡಲಾಗಿತ್ತು. ಶುಕ್ರವಾರ ಅರಣ್ಯಾಧಿಕಾರಿ ಕಚೇರಿಯಲ್ಲೇ ₹15 ಸಾವಿರ ಲಂಚ ಪಡೆಯುತ್ತಿದ್ದಾಗ ದಾಳಿ ನಡೆದಿದೆ.</p>.<p>ಉಪ ವಲಯ ಸಹಾಯಕ ಅರಣ್ಯಧಿಕಾರಿ ಧನಲಕ್ಷ್ಮಿ ಹಾಗೂ ಜೀಪ್ ಚಾಲಕ ಮಣಿಕಂಠ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಮರಗಳ ಕಟಾವು ಮಾಡಲು ಅನುಮತಿಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಉಪ ವಲಯದ ಸಹಾಯಕ ಅರಣ್ಯಾಧಿಕಾರಿ ಧನಲಕ್ಷ್ಮಿ ಮತ್ತು ಜೀಪ್ ಚಾಲಕ ಮಣಿಕಂಠ ಶುಕ್ರವಾರ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.</p>.<p>ತಾಲ್ಲೂಕಿನ ದೊಡ್ಡಗಂಜೂರು ಬಳಿಯ ಪೆಟ್ರೋಲ್ ಬಂಕ್ ಜಾಗದಲ್ಲಿದ್ದ ಮರಗಳನ್ನು ಕಟಾವು ಮಾಡಲು ಗ್ರಾಮದ ರೈತ ಶ್ರೀನಾಥ್ ಎಂಬುವವರು ಉಪವಲಯ ಅರಣ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದರು. ಮರ ಕಟಾವು ಮಾಡಲು ಮೌಖಿಕವಾಗಿ ಅನುಮತಿ ನೀಡಿದ್ದರು ಎಂದು ತಿಳಿದು ಬಂದಿದೆ.</p>.<p>ಅನುಮತಿ ಪಡೆಯುವುದಕ್ಕಿಂತ ಮೊದಲೇ ಮರ ಕಟಾವು ಮಾಡಲಾಗಿದೆ ಎಂದು ಜಮೀನಿನ ಮಾಲೀಕ ಶ್ರೀನಾಥ್ ಅವರನ್ನು ಧನಲಕ್ಷ್ಮಿ ತರಾಟೆಗೆ ತೆಗೆದುಕೊಂಡಿದ್ದರು.</p>.<p>ನಂತರ ಅರಣ್ಯ ಇಲಾಖೆ ಜೀಪ್ ಚಾಲಕ ಮಣಿಕಂಠ ಮೂಲಕ ಮಾತುಕತೆ ನಡೆದು ₹50 ಸಾವಿರ ಲಂಚಕ್ಕೆ ಒತ್ತಾಯಿಸಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ಲೋಕಾಯುಕ್ತರಿಗೆ ದೂರು ನೀಡಲಾಗಿತ್ತು. ಶುಕ್ರವಾರ ಅರಣ್ಯಾಧಿಕಾರಿ ಕಚೇರಿಯಲ್ಲೇ ₹15 ಸಾವಿರ ಲಂಚ ಪಡೆಯುತ್ತಿದ್ದಾಗ ದಾಳಿ ನಡೆದಿದೆ.</p>.<p>ಉಪ ವಲಯ ಸಹಾಯಕ ಅರಣ್ಯಧಿಕಾರಿ ಧನಲಕ್ಷ್ಮಿ ಹಾಗೂ ಜೀಪ್ ಚಾಲಕ ಮಣಿಕಂಠ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>