<p><strong>ಶಿಡ್ಲಘಟ್ಟ:</strong> ಪಲಿಚೇರ್ಲು-ಕನ್ನಪ್ಪನಹಳ್ಳಿ ಬಳಿಯ ಗೋಮಾಳದ ಹಳ್ಳದಲ್ಲಿ ನೀರು ಕುಡಿಯಲು ತೆರಳಿದ ಮೇಕೆ ಮೇಲೆ ಚಿರತೆ ದಾಳಿ ನಡೆಸಿದೆ ಎನ್ನಲಾದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮಂಗಳವಾರ ಪರಿಶೀಲಿಸಿದರು. ಸ್ಥಳೀಯರಿಂದ ಅಗತ್ಯ ಮಾಹಿತಿ ಪಡೆದರು.</p>.<p>ವಲಯ ಅರಣ್ಯ ಅಧಿಕಾರಿ ರಾಜೇಶ್ ಗವಾಲ್ ಹಾಗೂ ತಂಡ ಚಿರತೆ ಕಾಣಿಸಿಕೊಂಡಿತು ಎನ್ನಲಾದ ಸ್ಥಳಕ್ಕೆ ಭೇಟಿ ನೀಡಿ ಹೆಜ್ಜೆ ಗುರುತು ಪರಿಶೀಲಿಸಿದರು. ದಾಳಿಗೆ ಒಳಗಾಗಿದ್ದ ಮೇಕೆಯನ್ನು ವೀಕ್ಷಿಸಿದರು. ಮೇಕೆ ಚೇತರಿಸಿಕೊಂಡಿದ್ದು ಆರೋಗ್ಯವಾಗಿದ್ದು ಎಂದಿನಂತೆ ಮೇವು ನೀರು ಸೇವಿಸಿದೆ.</p>.<p>ಪಲಿಚೇರ್ಲು, ಕನ್ನಪ್ಪನಹಳ್ಳಿಯ ಗ್ರಾಮದಲ್ಲಿ ಸುತ್ತಾಡಿ ಗ್ರಾಮಸ್ಥರಿಂದ ಮಾಹಿತಿ ಪಡೆದರು. ಇತ್ತೀಚಿನ ದಿನಗಳಲ್ಲಿ ಸಾಕು ನಾಯಿ, ಬೀದಿ ನಾಯಿಗಳ ಸಂಖ್ಯೆಯಲ್ಲಿ ಏರಿಳಿತ, ನಾಪತ್ತೆ ಆಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.</p>.<p>ಮೇಕೆ ಕುರಿಗಳನ್ನು ಬಯಲಿಗೆ ಕರೆದೊಯ್ದಿದ್ದ ದ್ಯಾವಪ್ಪ ಮತ್ತು ಚಿರತೆ ನೋಡಿದ್ದೆ ಎಂದಿದ್ದ ದೇವೇಂದ್ರಪ್ಪ ಅವರನ್ನು ಭೇಟಿ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು ಚರ್ಚಿಸಿದರು.</p>.<p>ಪಲಿಚೇರ್ಲು ಗ್ರಾಮ ಪಂಚಾಯಿತಿಯ ಪಿಡಿಒ ಅವರೊಂದಿಗೂ ಚರ್ಚಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರಲ್ಲಿ ಅರಿವು ಮೂಡಿಸುವ ಕೆಲಸ ಮಾಡುವಂತೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ಪಲಿಚೇರ್ಲು-ಕನ್ನಪ್ಪನಹಳ್ಳಿ ಬಳಿಯ ಗೋಮಾಳದ ಹಳ್ಳದಲ್ಲಿ ನೀರು ಕುಡಿಯಲು ತೆರಳಿದ ಮೇಕೆ ಮೇಲೆ ಚಿರತೆ ದಾಳಿ ನಡೆಸಿದೆ ಎನ್ನಲಾದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮಂಗಳವಾರ ಪರಿಶೀಲಿಸಿದರು. ಸ್ಥಳೀಯರಿಂದ ಅಗತ್ಯ ಮಾಹಿತಿ ಪಡೆದರು.</p>.<p>ವಲಯ ಅರಣ್ಯ ಅಧಿಕಾರಿ ರಾಜೇಶ್ ಗವಾಲ್ ಹಾಗೂ ತಂಡ ಚಿರತೆ ಕಾಣಿಸಿಕೊಂಡಿತು ಎನ್ನಲಾದ ಸ್ಥಳಕ್ಕೆ ಭೇಟಿ ನೀಡಿ ಹೆಜ್ಜೆ ಗುರುತು ಪರಿಶೀಲಿಸಿದರು. ದಾಳಿಗೆ ಒಳಗಾಗಿದ್ದ ಮೇಕೆಯನ್ನು ವೀಕ್ಷಿಸಿದರು. ಮೇಕೆ ಚೇತರಿಸಿಕೊಂಡಿದ್ದು ಆರೋಗ್ಯವಾಗಿದ್ದು ಎಂದಿನಂತೆ ಮೇವು ನೀರು ಸೇವಿಸಿದೆ.</p>.<p>ಪಲಿಚೇರ್ಲು, ಕನ್ನಪ್ಪನಹಳ್ಳಿಯ ಗ್ರಾಮದಲ್ಲಿ ಸುತ್ತಾಡಿ ಗ್ರಾಮಸ್ಥರಿಂದ ಮಾಹಿತಿ ಪಡೆದರು. ಇತ್ತೀಚಿನ ದಿನಗಳಲ್ಲಿ ಸಾಕು ನಾಯಿ, ಬೀದಿ ನಾಯಿಗಳ ಸಂಖ್ಯೆಯಲ್ಲಿ ಏರಿಳಿತ, ನಾಪತ್ತೆ ಆಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.</p>.<p>ಮೇಕೆ ಕುರಿಗಳನ್ನು ಬಯಲಿಗೆ ಕರೆದೊಯ್ದಿದ್ದ ದ್ಯಾವಪ್ಪ ಮತ್ತು ಚಿರತೆ ನೋಡಿದ್ದೆ ಎಂದಿದ್ದ ದೇವೇಂದ್ರಪ್ಪ ಅವರನ್ನು ಭೇಟಿ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು ಚರ್ಚಿಸಿದರು.</p>.<p>ಪಲಿಚೇರ್ಲು ಗ್ರಾಮ ಪಂಚಾಯಿತಿಯ ಪಿಡಿಒ ಅವರೊಂದಿಗೂ ಚರ್ಚಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರಲ್ಲಿ ಅರಿವು ಮೂಡಿಸುವ ಕೆಲಸ ಮಾಡುವಂತೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>