<p><strong>ಚಿಕ್ಕಬಳ್ಳಾಪುರ:</strong> ನಗರದ ಹೊರವಲಯದ ಸೂಲಾಲಪ್ಪನದಿನ್ನೆಯ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನದಲ್ಲಿ ಗುರುವಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ನಡೆಯಿತು.</p>.<p>ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ವನ್ಯ ಸಂಪತ್ತು ನಾಡಿನ ಪ್ರಮುಖ ಸಂಪತ್ತಾಗಿದೆ. ಕಾಡು ಇದ್ದರೆ ಮಾತ್ರ ಜೀವ ಸಂಕುಲ ಸಮೃದ್ಧವಾಗಿರಲು ಸಾಧ್ಯ. ಅರಣ್ಯ, ಅಲ್ಲಿನ ವನ್ಯಜೀವಿ ಸಂಕುಲವನ್ನು ಕಾಪಾಡಬೇಕಾದುದು ನಮ್ಮ ಎಲ್ಲ ಎಲ್ಲರ ಕರ್ತವ್ಯ ಎಂದು ಹೇಳಿದರು.</p>.<p>ಅರಣ್ಯ ಇಲಾಖೆಯ ಸಿಬ್ಬಂದಿಯ ಕರ್ತವ್ಯ ಸಂದರ್ಭದಲ್ಲಿ ಅವಘಡದಿಂದ ಪ್ರಾಣಕಳೆದುಕೊಂಡ ನಿದರ್ಶನವಿದೆ. ಕಾಡು ಪ್ರಾಣಿಗಳ ದಾಳಿಗೂ ತುತ್ತಾಗಿದ್ದಾರೆ. ಅರಣ್ಯ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎಂದರು.</p>.<p>ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಸಿ.ಎಚ್., ಹುತಾತ್ಮ ದಿನದ ಮಹತ್ವದ ಬಗ್ಗೆ ವಿವರಿಸಿದರು. ರಾಜ್ಯದಲ್ಲಿ ಹುತಾತ್ಮರಾದ 62 ಮಂದಿಯ ಹೆಸರು ಓದಿ ಗೌರವ ಸಲ್ಲಿಸಲಾಯಿತು.</p>.<p>ಅರಣ್ಯ ಇಲಾಖೆಯ ಕವಾಯತು ತಂಡ ಹಾಗೂ ಜಿಲ್ಲಾ ಪೊಲೀಸ್ ವಾದ್ಯ ವೃಂದದಿಂದ ಹುತಾತ್ಮರಿಗೆ ಗೌರವ ಸಲ್ಲಿಸಲಾಯಿತು. ಮೌನಾಚರಣೆ ನಡೆಸಲಾಯಿತು. </p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಸಾಮಾಜಿಕ ಅರಣ್ಯ ವಿಭಾಗದ ಡಿಎಫ್ಒ ಗೀತಾ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ನಗರದ ಹೊರವಲಯದ ಸೂಲಾಲಪ್ಪನದಿನ್ನೆಯ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನದಲ್ಲಿ ಗುರುವಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ನಡೆಯಿತು.</p>.<p>ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ವನ್ಯ ಸಂಪತ್ತು ನಾಡಿನ ಪ್ರಮುಖ ಸಂಪತ್ತಾಗಿದೆ. ಕಾಡು ಇದ್ದರೆ ಮಾತ್ರ ಜೀವ ಸಂಕುಲ ಸಮೃದ್ಧವಾಗಿರಲು ಸಾಧ್ಯ. ಅರಣ್ಯ, ಅಲ್ಲಿನ ವನ್ಯಜೀವಿ ಸಂಕುಲವನ್ನು ಕಾಪಾಡಬೇಕಾದುದು ನಮ್ಮ ಎಲ್ಲ ಎಲ್ಲರ ಕರ್ತವ್ಯ ಎಂದು ಹೇಳಿದರು.</p>.<p>ಅರಣ್ಯ ಇಲಾಖೆಯ ಸಿಬ್ಬಂದಿಯ ಕರ್ತವ್ಯ ಸಂದರ್ಭದಲ್ಲಿ ಅವಘಡದಿಂದ ಪ್ರಾಣಕಳೆದುಕೊಂಡ ನಿದರ್ಶನವಿದೆ. ಕಾಡು ಪ್ರಾಣಿಗಳ ದಾಳಿಗೂ ತುತ್ತಾಗಿದ್ದಾರೆ. ಅರಣ್ಯ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎಂದರು.</p>.<p>ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಸಿ.ಎಚ್., ಹುತಾತ್ಮ ದಿನದ ಮಹತ್ವದ ಬಗ್ಗೆ ವಿವರಿಸಿದರು. ರಾಜ್ಯದಲ್ಲಿ ಹುತಾತ್ಮರಾದ 62 ಮಂದಿಯ ಹೆಸರು ಓದಿ ಗೌರವ ಸಲ್ಲಿಸಲಾಯಿತು.</p>.<p>ಅರಣ್ಯ ಇಲಾಖೆಯ ಕವಾಯತು ತಂಡ ಹಾಗೂ ಜಿಲ್ಲಾ ಪೊಲೀಸ್ ವಾದ್ಯ ವೃಂದದಿಂದ ಹುತಾತ್ಮರಿಗೆ ಗೌರವ ಸಲ್ಲಿಸಲಾಯಿತು. ಮೌನಾಚರಣೆ ನಡೆಸಲಾಯಿತು. </p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಸಾಮಾಜಿಕ ಅರಣ್ಯ ವಿಭಾಗದ ಡಿಎಫ್ಒ ಗೀತಾ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>