<p><strong>ಗೌರಿಬಿದನೂರು</strong>: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ಕು ಬೈಕ್ ಕಳ್ಳರನ್ನು ಗೌರಿಬಿದನೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ₹ 11.5 ಲಕ್ಷ ಮೌಲ್ಯದ 23 ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ. ನಾಲ್ಕು ಮಂದಿ ಆರೋಪಿಗಳು ಆಂಧ್ರಪ್ರದೇಶದ ಹಿಂದೂಪುರದವರಾಗಿದ್ದಾರೆ.</p>.<p>ಜು.29ರಂದು ಗೌರಿಬಿದನೂರಿನ ಯಶಸ್ವಿನಿ ಕಾಲೇಜು ಮುಂಭಾಗ ಅಬ್ದುಲ್ ಖಾದರ್ ಎಂಬುವವರ ಬೈಕ್ ನಿಲ್ಲಿಸಿದ್ದು ಇವರ ಬೈಕ್ ಕಳ್ಳತನವಾಗಿತ್ತು. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು. ಎಚ್ಡಿಎಫ್ಸಿ ಬ್ಯಾಂಕ್ ಮುಂಭಾಗದ ವಾಹನ ನಿಲುಗಡೆ ಪ್ರದೇಶದಲ್ಲಿದ್ದ ಆರೋಪಿಗಳಾದ ಎಸ್.ನವೀದ್, ಎಸ್.ಅಲೀಮುಲ್ಲಾ, ಶಹಬಾಜ್ ಅವರನ್ನು ಬಂಧಿಸಿದ್ದರು.</p>.<p>ಈ ಮೂವರು ಆರೋಪಿಗಳಿಂದ ಪೊಲೀಸರು ₹ 8.5 ಲಕ್ಷ ಮೌಲ್ಯದ 15 ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಹಿಂದೂಪುರ, ಗೌರಿಬಿದನೂರು ಮತ್ತು ಪಾವಗಡದಲ್ಲಿ ಬೈಕ್ಗಳನ್ನು ಕಳ್ಳತನ ಮಾಡಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ.</p>.<p>ಮತ್ತೊಬ್ಬ ಬಂಧನ: ಗೌರಿಬಿದನೂರಿನ ವೆಂಕಟೇಶ ಬಾಬು ಅವರು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿತ್ತು. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಕಾರ್ಯಾಚರಣೆ ನಡೆಸಿ ಗೌರಿಬಿದನೂರು ಆಸ್ಪತ್ರೆಯ ಮುಂಭಾಗದಲ್ಲಿದ್ದ ಆರೋಪಿ ಶೇಕ್ ಗೌಸ್ ಮದೀನ್ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ₹ 3 ಲಕ್ಷ ಮೌಲ್ಯದ 8 ದ್ವಿಚಕ್ರ ವಾಹನಗಳನ್ನು ವಶಕ್ಕೆ<br />ಪಡೆಯಲಾಗಿದೆ.</p>.<p>ಗೌರಿಬಿದನೂರು ಸಿಪಿಐ ಸತ್ಯನಾರಾಯಣ್ ನೇತೃತ್ವದಲ್ಲಿ ಪಿಎಸ್ಐ ಚಂದ್ರಕಲಾ, ಸಿಬ್ಬಂದಿ ರಾಮಯ್ಯ, ರಿಜ್ವಾನ್, ಅಶ್ವತ್ಥ, ಶಿವಶೇಖರ್, ಸುಬ್ರಹ್ಮಣ್ಯ, ಮಂಜುನಾಥ್, ವಿನಯ್ ಕುಮಾರ್, ದೇವರಾಜ್, ಪ್ರಕಾಶ್ ತಗ್ಗಳ್ಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆರೋಪಿಗಳನ್ನು ಬಂಧಿಸಿದ ಸಿಬ್ಬಂದಿಯನ್ನು ಎಸ್ಪಿ ಡಿ.ಎಲ್.ನಾಗೇಶ್ ಮತ್ತು ಡಿವೈಎಸ್ಪಿ ವಾಸುದೇವ್<br />ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ಕು ಬೈಕ್ ಕಳ್ಳರನ್ನು ಗೌರಿಬಿದನೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ₹ 11.5 ಲಕ್ಷ ಮೌಲ್ಯದ 23 ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ. ನಾಲ್ಕು ಮಂದಿ ಆರೋಪಿಗಳು ಆಂಧ್ರಪ್ರದೇಶದ ಹಿಂದೂಪುರದವರಾಗಿದ್ದಾರೆ.</p>.<p>ಜು.29ರಂದು ಗೌರಿಬಿದನೂರಿನ ಯಶಸ್ವಿನಿ ಕಾಲೇಜು ಮುಂಭಾಗ ಅಬ್ದುಲ್ ಖಾದರ್ ಎಂಬುವವರ ಬೈಕ್ ನಿಲ್ಲಿಸಿದ್ದು ಇವರ ಬೈಕ್ ಕಳ್ಳತನವಾಗಿತ್ತು. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು. ಎಚ್ಡಿಎಫ್ಸಿ ಬ್ಯಾಂಕ್ ಮುಂಭಾಗದ ವಾಹನ ನಿಲುಗಡೆ ಪ್ರದೇಶದಲ್ಲಿದ್ದ ಆರೋಪಿಗಳಾದ ಎಸ್.ನವೀದ್, ಎಸ್.ಅಲೀಮುಲ್ಲಾ, ಶಹಬಾಜ್ ಅವರನ್ನು ಬಂಧಿಸಿದ್ದರು.</p>.<p>ಈ ಮೂವರು ಆರೋಪಿಗಳಿಂದ ಪೊಲೀಸರು ₹ 8.5 ಲಕ್ಷ ಮೌಲ್ಯದ 15 ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಹಿಂದೂಪುರ, ಗೌರಿಬಿದನೂರು ಮತ್ತು ಪಾವಗಡದಲ್ಲಿ ಬೈಕ್ಗಳನ್ನು ಕಳ್ಳತನ ಮಾಡಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ.</p>.<p>ಮತ್ತೊಬ್ಬ ಬಂಧನ: ಗೌರಿಬಿದನೂರಿನ ವೆಂಕಟೇಶ ಬಾಬು ಅವರು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿತ್ತು. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಕಾರ್ಯಾಚರಣೆ ನಡೆಸಿ ಗೌರಿಬಿದನೂರು ಆಸ್ಪತ್ರೆಯ ಮುಂಭಾಗದಲ್ಲಿದ್ದ ಆರೋಪಿ ಶೇಕ್ ಗೌಸ್ ಮದೀನ್ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ₹ 3 ಲಕ್ಷ ಮೌಲ್ಯದ 8 ದ್ವಿಚಕ್ರ ವಾಹನಗಳನ್ನು ವಶಕ್ಕೆ<br />ಪಡೆಯಲಾಗಿದೆ.</p>.<p>ಗೌರಿಬಿದನೂರು ಸಿಪಿಐ ಸತ್ಯನಾರಾಯಣ್ ನೇತೃತ್ವದಲ್ಲಿ ಪಿಎಸ್ಐ ಚಂದ್ರಕಲಾ, ಸಿಬ್ಬಂದಿ ರಾಮಯ್ಯ, ರಿಜ್ವಾನ್, ಅಶ್ವತ್ಥ, ಶಿವಶೇಖರ್, ಸುಬ್ರಹ್ಮಣ್ಯ, ಮಂಜುನಾಥ್, ವಿನಯ್ ಕುಮಾರ್, ದೇವರಾಜ್, ಪ್ರಕಾಶ್ ತಗ್ಗಳ್ಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆರೋಪಿಗಳನ್ನು ಬಂಧಿಸಿದ ಸಿಬ್ಬಂದಿಯನ್ನು ಎಸ್ಪಿ ಡಿ.ಎಲ್.ನಾಗೇಶ್ ಮತ್ತು ಡಿವೈಎಸ್ಪಿ ವಾಸುದೇವ್<br />ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>