<p><strong>ಚಿಂತಾಮಣಿ</strong>: ರೈತರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸಾಲಮನ್ನಾದ ₹11 ಕೋಟಿ ವಂಚಿಸಿದ್ದಾರೆ ಎಂದು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ) ವ್ಯವಸ್ಥಾಪಕ ಜಿ.ಚಂದ್ರಶೇಖರ್ ಎಂಬುವವರ ವಿರುದ್ಧ ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.</p>.<p>ಡಿಸಿಸಿ ವ್ಯವಸ್ಥಾಪಕ ಜಿ.ಚಂದ್ರಶೇಖರ್ ವಿರುದ್ಧ ತಳಗವಾರ ಗ್ರಾಮದ ಟಿ.ಎಸ್.ಪ್ರತಾಪ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.</p>.<p>ಆರ್ಥಿಕ ಸಂಕಷ್ಟದಲ್ಲಿರುವ ಬಡ ರೈತ ಕುಟುಂಬಗಳಿಗೆ ನೆರವಾಗಲು ರಾಜ್ಯ ಸರ್ಕಾರ 2016-17 ಮತ್ತು 2018-19ರಲ್ಲಿ ಸಾಲ ಮನ್ನಾ ಯೋಜನೆ ರೂಪಿಸಿತ್ತು. ಆದರೆ, ಚಂದ್ರಶೇಖರ್ ಅವರು 2018ರಲ್ಲಿ ರೈತರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸಾಲ ಮನ್ನಾ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. </p>.<p>2021ರ ಜ.8 ರಂದು ನಡೆದ ಡಿಸಿಸಿ ಬ್ಯಾಂಕ್ನ ಆಡಳಿತ ಮಂಡಳಿ ಸಭೆಯಲ್ಲಿ ₹ 11 ಕೋಟಿ ನಷ್ಟಕ್ಕೆ ಸಂಬಂಧಿಸಿದಂತೆ ವ್ಯವಸ್ಥಾಪಕ ಚಂದ್ರಶೇಖರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಿಲ್ಲ. ವಂಚನೆ ಮಾಡಿದ ಅಧಿಕಾರಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಬ್ಯಾಂಕಿನ ಉನ್ನತ ವ್ಯಕ್ತಿಗಳು ಈ ಅವ್ಯವಹಾರದಲ್ಲಿ ಶಾಮೀಲಾಗಿರುವ ಸಾಧ್ಯತೆ ಇದೆ ಎಂದು ದೂರುದಾರರು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅವರಿಗೆ ಯಾವುದೇ ಆದಾಯ ಮೂಲವಿಲ್ಲ. ಆದರೂ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಆಪ್ತರ ಹೆಸರಿನಲ್ಲಿಯೂ ಕ್ರಮ ಆಸ್ತಿ ಸಂಪಾದಿಸಿದ್ದಾರೆ. ಈ ಹಗರಣದಲ್ಲಿ ಬ್ಯಾಲಹಳ್ಳಿ ಗೋವಿಂದ ಗೌಡ ಅವರ ಪಾತ್ರ ಪ್ರಮುಖವಾಗಿರಬಹುದು ಎಂಬ ಸಂಶಯವಿದೆ. ಆದ್ದರಿಂದ ಕಾನೂನು ರೀತಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ರೈತರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸಾಲಮನ್ನಾದ ₹11 ಕೋಟಿ ವಂಚಿಸಿದ್ದಾರೆ ಎಂದು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ) ವ್ಯವಸ್ಥಾಪಕ ಜಿ.ಚಂದ್ರಶೇಖರ್ ಎಂಬುವವರ ವಿರುದ್ಧ ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.</p>.<p>ಡಿಸಿಸಿ ವ್ಯವಸ್ಥಾಪಕ ಜಿ.ಚಂದ್ರಶೇಖರ್ ವಿರುದ್ಧ ತಳಗವಾರ ಗ್ರಾಮದ ಟಿ.ಎಸ್.ಪ್ರತಾಪ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.</p>.<p>ಆರ್ಥಿಕ ಸಂಕಷ್ಟದಲ್ಲಿರುವ ಬಡ ರೈತ ಕುಟುಂಬಗಳಿಗೆ ನೆರವಾಗಲು ರಾಜ್ಯ ಸರ್ಕಾರ 2016-17 ಮತ್ತು 2018-19ರಲ್ಲಿ ಸಾಲ ಮನ್ನಾ ಯೋಜನೆ ರೂಪಿಸಿತ್ತು. ಆದರೆ, ಚಂದ್ರಶೇಖರ್ ಅವರು 2018ರಲ್ಲಿ ರೈತರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸಾಲ ಮನ್ನಾ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. </p>.<p>2021ರ ಜ.8 ರಂದು ನಡೆದ ಡಿಸಿಸಿ ಬ್ಯಾಂಕ್ನ ಆಡಳಿತ ಮಂಡಳಿ ಸಭೆಯಲ್ಲಿ ₹ 11 ಕೋಟಿ ನಷ್ಟಕ್ಕೆ ಸಂಬಂಧಿಸಿದಂತೆ ವ್ಯವಸ್ಥಾಪಕ ಚಂದ್ರಶೇಖರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಿಲ್ಲ. ವಂಚನೆ ಮಾಡಿದ ಅಧಿಕಾರಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಬ್ಯಾಂಕಿನ ಉನ್ನತ ವ್ಯಕ್ತಿಗಳು ಈ ಅವ್ಯವಹಾರದಲ್ಲಿ ಶಾಮೀಲಾಗಿರುವ ಸಾಧ್ಯತೆ ಇದೆ ಎಂದು ದೂರುದಾರರು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅವರಿಗೆ ಯಾವುದೇ ಆದಾಯ ಮೂಲವಿಲ್ಲ. ಆದರೂ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಆಪ್ತರ ಹೆಸರಿನಲ್ಲಿಯೂ ಕ್ರಮ ಆಸ್ತಿ ಸಂಪಾದಿಸಿದ್ದಾರೆ. ಈ ಹಗರಣದಲ್ಲಿ ಬ್ಯಾಲಹಳ್ಳಿ ಗೋವಿಂದ ಗೌಡ ಅವರ ಪಾತ್ರ ಪ್ರಮುಖವಾಗಿರಬಹುದು ಎಂಬ ಸಂಶಯವಿದೆ. ಆದ್ದರಿಂದ ಕಾನೂನು ರೀತಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>