ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ದಟ್ಟಣೆಯನ್ನು ನಿಯಂತ್ರಿಸುವ ಹಾಗೂ ಸೋಂಕಿನ ತೀವ್ರತೆ ಕಡಿಮೆ ಮಾಡುವ ನಿಟ್ಟಿನಲ್ಲಿ ತಾಲ್ಲೂಕು ಕೋವಿಡ್-19 ನಿಯಂತ್ರಣದ ವಿಶೇಷ ಅಧಿಕಾರಿಯಾಗಿ ನೇಮಕವಾಗಿದ್ದ ಬಿ.ಎನ್.ವರಪ್ರಸಾದರೆಡ್ಡಿ ಹಾಗೂ ಅಧಿಕಾರಿಗಳ ನೇತೃತ್ವದಲ್ಲಿ ನಗರದ ವಿವಿಧ ವಾರ್ಡ್ಗಳಲ್ಲಿ ಆರಂಭವಾದ ‘ರೈತರ ಸಂತೆ’ ಇಂದಿಗೂ ನಗರದ ಜನರಿಗೆ ಆಸರೆಯಾಗಿ ನಿತ್ಯ ರೈತರಿಂದ ನೇರವಾಗಿ ತಾಜಾ ಹಣ್ಣು, ತರಕಾರಿ, ಸೊಪ್ಪು ಸೇರಿದಂತೆ ಇನ್ನಿತರ ಅವಶ್ಯಕ ವಸ್ತುಗಳನ್ನು ಖರೀದಿ ಮಾಡಲು ಸಹಕಾರಿಯಾಗಿದೆ.