ಗೌರಿಬಿದನೂರು: ನಗರದಲ್ಲಿ ಭಾನುವಾರ ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ನಗರಸಭೆ ಸದಸ್ಯ ಮೋಹನ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಇಡೀ ರಾಷ್ಟ್ರದ ಜನತೆ ದಶಕಗಳಿಂದ ಕಾಯುತ್ತಿರುವ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಸುಯೋಗ ಕೂಡಿಬಂದಿದೆ. ದೇಶದಲ್ಲಿನ ಎಲ್ಲ ಹಿಂದೂ ಧರ್ಮದವರು ಒಮ್ಮತದಿಂದ ಈ ಧಾರ್ಮಿಕ ಕಾರ್ಯಕ್ಕೆ ಸಹಕಾರಿಯಾಗಬೇಕಾಗಿದೆ ಎಂದರು.
ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಪ್ರತಿ ಮನೆಯಿಂದ ದೇಣಿಗೆ ಸಂಗ್ರಹಣೆ ಮಾಡಿ ನಿಧಿ ಸಮರ್ಪಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಇದರಿಂದ ರಾಷ್ಟ್ರದ ನಿಜವಾದ ಕರ್ತವ್ಯವನ್ನು ಪೂರೈಸಿದಂತಾಗುತ್ತದೆ. ಈ ಸತ್ಕಾರ್ಯಕ್ಕೆ ಎಲ್ಲರೂ ಕೈಜೋಡಿಸುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.