‘ಅಹಿಂಸೆ ಮಾರ್ಗದಲ್ಲಿ ನಾವು ಏನಾದರೂ ಸಾಧಿಸಬಹುದು ಎಂಬ ಸಂದೇಶವನ್ನು ಗಾಂಧಿ ಸಮಾಜಕ್ಕೆ ನೀಡಿದರು. ಜತೆಗೆ ದೇಶದ ಸೇವೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟರು. ಅಂತಹ ಮಹಾತ್ಮನ ಬಗ್ಗೆ ಸ್ತಬ್ಧಚಿತ್ರದ ಅಭಿಯಾನದ ಮೂಲಕ ನಾಗರಿಕರಲ್ಲಿ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ’ ಎಂದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಆರಂಭಗೊಂಡ ಸ್ತಬ್ಧಚಿತ್ರದ ಯಾತ್ರೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ತಹಶೀಲ್ದಾರ್ ನರಸಿಂಹಮೂರ್ತಿ, ನಗರಸಭೆ ಆಯುಕ್ತ ಉಮಾಕಾಂತ್,ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತಲಾ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ ಉಪಸ್ಥಿತರಿದ್ದರು.