<p><strong>ಚಿಕ್ಕಬಳ್ಳಾಪುರ:</strong> ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪ್ರತಿನಿತ್ಯ ಗಾಂಧಿ ಭವನಕ್ಕೆ ಭೇಟಿ ನೀಡುವಂತೆ ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು. </p>.<p>ನಗರದ ಗಾಂಧಿ ಭವನಕ್ಕೆ ಗುರುವಾರ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.</p>.<p>ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜೀವನ ಸಂದೇಶಗಳು ಮತ್ತು ಆದರ್ಶಗಳನ್ನು ಇಂದಿನ ಹಾಗೂ ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಸರ್ಕಾರ ₹3 ಕೋಟಿ ವೆಚ್ಚದಲ್ಲಿ ಗಾಂಧಿ ಭವನ ನಿರ್ಮಿಸಿದೆ. ಗಾಂಧಿ ಭವನವು ಚೆನ್ನಾಗಿ ಮೂಡಿಬಂದಿದೆ. ಈ ಸುಂದರ ಭವನಕ್ಕೆ ಇನ್ನಷ್ಟು ಮೂಲ ಸೌಕರ್ಯ, ಆಕರ್ಷಣೆಗಳನ್ನು ಕಲ್ಪಿಸಿ ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭವನಕ್ಕೆ ಭೇಟಿ ನೀಡುವಂತೆ ಪ್ರೇರೇಪಣೆ ಮಾಡಬೇಕು ಎಂದು ಹೇಳಿದರು.</p>.<p>ಆ ನಿಟ್ಟಿನಲ್ಲಿ ಗಾಂಧಿ ಭವನ ನಿರ್ವಹಣಾ ಸಮಿತಿ ರಚಿಸಬೇಕು. ಚಿಕ್ಕಬಳ್ಳಾಪುರ ನಗರಸಭೆಯ ಪೌರಾಯುಕ್ತರನ್ನು ಸಮಿತಿ ಸದಸ್ಯ ಕಾರ್ಯದರ್ಶಿಯಾಗಿ ನೇಮಿಸಬೇಕು. ಗಾಂಧಿ ಭವನದ ಸ್ವಚ್ಚತೆ ಸೇರಿದಂತೆ ಇತರ ನಿರ್ವಹಣೆಗಳನ್ನು ಸಮಪರ್ಕವಾಗಿ ಹಾಗೂ ಅರ್ಥ ಪೂರ್ಣವಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಅವರು ಗಾಂಧಿ ಅಂಗಳ, ಛಾಯಾಚಿತ್ರ ಗ್ಯಾಲರಿ ಹಾಗೂ ಸಭಾಂಗಣವನ್ನು ವೀಕ್ಷಿಸಿದರು.</p>.<p>ತಹಶೀಲ್ದಾರ್ ರಶ್ಮಿ, ನಗರಸಭೆ ಪೌರಾಯುಕ್ತ ಮನ್ಸೂರ್ ಆಲಿ, ಪರಿಸರ ಎಂಜಿನಿಯರ್ ಉಮಾಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾ ಸಹಾಯಕ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪ್ರತಿನಿತ್ಯ ಗಾಂಧಿ ಭವನಕ್ಕೆ ಭೇಟಿ ನೀಡುವಂತೆ ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು. </p>.<p>ನಗರದ ಗಾಂಧಿ ಭವನಕ್ಕೆ ಗುರುವಾರ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.</p>.<p>ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜೀವನ ಸಂದೇಶಗಳು ಮತ್ತು ಆದರ್ಶಗಳನ್ನು ಇಂದಿನ ಹಾಗೂ ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಸರ್ಕಾರ ₹3 ಕೋಟಿ ವೆಚ್ಚದಲ್ಲಿ ಗಾಂಧಿ ಭವನ ನಿರ್ಮಿಸಿದೆ. ಗಾಂಧಿ ಭವನವು ಚೆನ್ನಾಗಿ ಮೂಡಿಬಂದಿದೆ. ಈ ಸುಂದರ ಭವನಕ್ಕೆ ಇನ್ನಷ್ಟು ಮೂಲ ಸೌಕರ್ಯ, ಆಕರ್ಷಣೆಗಳನ್ನು ಕಲ್ಪಿಸಿ ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭವನಕ್ಕೆ ಭೇಟಿ ನೀಡುವಂತೆ ಪ್ರೇರೇಪಣೆ ಮಾಡಬೇಕು ಎಂದು ಹೇಳಿದರು.</p>.<p>ಆ ನಿಟ್ಟಿನಲ್ಲಿ ಗಾಂಧಿ ಭವನ ನಿರ್ವಹಣಾ ಸಮಿತಿ ರಚಿಸಬೇಕು. ಚಿಕ್ಕಬಳ್ಳಾಪುರ ನಗರಸಭೆಯ ಪೌರಾಯುಕ್ತರನ್ನು ಸಮಿತಿ ಸದಸ್ಯ ಕಾರ್ಯದರ್ಶಿಯಾಗಿ ನೇಮಿಸಬೇಕು. ಗಾಂಧಿ ಭವನದ ಸ್ವಚ್ಚತೆ ಸೇರಿದಂತೆ ಇತರ ನಿರ್ವಹಣೆಗಳನ್ನು ಸಮಪರ್ಕವಾಗಿ ಹಾಗೂ ಅರ್ಥ ಪೂರ್ಣವಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಅವರು ಗಾಂಧಿ ಅಂಗಳ, ಛಾಯಾಚಿತ್ರ ಗ್ಯಾಲರಿ ಹಾಗೂ ಸಭಾಂಗಣವನ್ನು ವೀಕ್ಷಿಸಿದರು.</p>.<p>ತಹಶೀಲ್ದಾರ್ ರಶ್ಮಿ, ನಗರಸಭೆ ಪೌರಾಯುಕ್ತ ಮನ್ಸೂರ್ ಆಲಿ, ಪರಿಸರ ಎಂಜಿನಿಯರ್ ಉಮಾಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾ ಸಹಾಯಕ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>