<p><strong>ಚಿಕ್ಕಬಳ್ಳಾಪುರ:</strong> ಗಣೇಶ ಚತುರ್ಥಿ ಮುನ್ನ ದಿನವಾದ ಮಂಗಳವಾರ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಹಬ್ಬದ ಖರೀದಿ ಭರಾಟೆ ಜೋರಾಗಿತ್ತು. ಹಬ್ಬದ ಕಾರಣ ಹೂವು, ಹಣ್ಣಿನ ಬೆಲೆಯಲ್ಲಿ ಕೊಂಚ ಹೆಚ್ಚಳವಾಗಿತ್ತು.</p>.<p>ನಗರದ ಸುತ್ತಲಿನ ಸಂಘ ಸಂಸ್ಥೆಗಳ ಜನರು ಗಣೇಶನ ಮೂರ್ತಿ ಖರೀದಿಸಲು ವಾಹನಗಳ ಸಮೇತ ಬಂದಿದ್ದ ಕಾರಣ ಬಿ.ಬಿ.ರಸ್ತೆಯಲ್ಲಿ ಸಂಚಾರ ದಟ್ಟಣೆ ಇತ್ತು. ಬಜಾರ್ ರಸ್ತೆ, ಎಂ.ಜಿ.ರಸ್ತೆ, ಸಂತೆ ಮಾರುಕಟ್ಟೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಬೀದಿಬದಿ ಹಬ್ಬದ ವ್ಯಾಪಾರ ಬೆಳಿಗ್ಗೆಯಿಂದಲೇ ಆರಂಭಗೊಂಡಿತು.</p>.<p>ಸಂಜೆಯ ಹೊತ್ತಿಗಾಗಲೇ ಮಾರುಕಟ್ಟೆ ಪ್ರದೇಶಗಳಲ್ಲಿ ಜನದಟ್ಟಣೆ ಹೆಚ್ಚಾಗಿ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿತ್ತು. ಹಬ್ಬದ ವಹಿವಾಟು ರಾತ್ರಿಯ ತನಕವೂ ಮುಂದುವರಿದಿತ್ತು.</p>.<p>ರಸ್ತೆಯ ಇಕ್ಕೆಲಗಳಲ್ಲಿ ಹಣ್ಣು, ಹೂವು, ತೆಂಗಿನಕಾಯಿ, ಗರಿಕೆ ಪತ್ರೆ, ಬಾಳೆಕಂದು, ಮಾವಿನಸೊಪ್ಪು, ಸಿಹಿ ತಿನಿಸುಗಳ ತಾತ್ಕಾಲಿಕ ಅಂಗಡಿ ತೆರೆದ ವ್ಯಾಪಾರಸ್ಥರು ಗ್ರಾಹಕರನ್ನು ಸೆಳೆಯುತ್ತಿದ್ದರು.</p>.<p class="Subhead">ಹೂವು ಮಾರುಕಟ್ಟೆಯಲ್ಲಿ ಜನಜಂಗುಳಿ: ನಗರ ಕೆ.ವಿ.ಕ್ಯಾಂಪಸ್ ಬಳಿಯ ಹೂ ಮಾರುಕಟ್ಟೆಯು ಜನರಿಂದ ತುಂಬಿತುಳುಕಿತ್ತು. ಹಬ್ಬದ ಕಾರಣ ನೆರೆಯ ಜಿಲ್ಲೆಗಳ ಜನರೂ ಮಾರುಕಟ್ಟೆಗೆ ಹೂ ಖರೀದಿಗೆ ಬಂದಿದ್ದರು.</p>.<p>ಮಾರುಕಟ್ಟೆಯ ಮುಂಭಾಗದಲ್ಲಿ ಹಣ್ಣು, ಕಾಯಿಯ ವಹಿವಾಟು ಸಹ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಗಣೇಶ ಚತುರ್ಥಿ ಮುನ್ನ ದಿನವಾದ ಮಂಗಳವಾರ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಹಬ್ಬದ ಖರೀದಿ ಭರಾಟೆ ಜೋರಾಗಿತ್ತು. ಹಬ್ಬದ ಕಾರಣ ಹೂವು, ಹಣ್ಣಿನ ಬೆಲೆಯಲ್ಲಿ ಕೊಂಚ ಹೆಚ್ಚಳವಾಗಿತ್ತು.</p>.<p>ನಗರದ ಸುತ್ತಲಿನ ಸಂಘ ಸಂಸ್ಥೆಗಳ ಜನರು ಗಣೇಶನ ಮೂರ್ತಿ ಖರೀದಿಸಲು ವಾಹನಗಳ ಸಮೇತ ಬಂದಿದ್ದ ಕಾರಣ ಬಿ.ಬಿ.ರಸ್ತೆಯಲ್ಲಿ ಸಂಚಾರ ದಟ್ಟಣೆ ಇತ್ತು. ಬಜಾರ್ ರಸ್ತೆ, ಎಂ.ಜಿ.ರಸ್ತೆ, ಸಂತೆ ಮಾರುಕಟ್ಟೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಬೀದಿಬದಿ ಹಬ್ಬದ ವ್ಯಾಪಾರ ಬೆಳಿಗ್ಗೆಯಿಂದಲೇ ಆರಂಭಗೊಂಡಿತು.</p>.<p>ಸಂಜೆಯ ಹೊತ್ತಿಗಾಗಲೇ ಮಾರುಕಟ್ಟೆ ಪ್ರದೇಶಗಳಲ್ಲಿ ಜನದಟ್ಟಣೆ ಹೆಚ್ಚಾಗಿ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿತ್ತು. ಹಬ್ಬದ ವಹಿವಾಟು ರಾತ್ರಿಯ ತನಕವೂ ಮುಂದುವರಿದಿತ್ತು.</p>.<p>ರಸ್ತೆಯ ಇಕ್ಕೆಲಗಳಲ್ಲಿ ಹಣ್ಣು, ಹೂವು, ತೆಂಗಿನಕಾಯಿ, ಗರಿಕೆ ಪತ್ರೆ, ಬಾಳೆಕಂದು, ಮಾವಿನಸೊಪ್ಪು, ಸಿಹಿ ತಿನಿಸುಗಳ ತಾತ್ಕಾಲಿಕ ಅಂಗಡಿ ತೆರೆದ ವ್ಯಾಪಾರಸ್ಥರು ಗ್ರಾಹಕರನ್ನು ಸೆಳೆಯುತ್ತಿದ್ದರು.</p>.<p class="Subhead">ಹೂವು ಮಾರುಕಟ್ಟೆಯಲ್ಲಿ ಜನಜಂಗುಳಿ: ನಗರ ಕೆ.ವಿ.ಕ್ಯಾಂಪಸ್ ಬಳಿಯ ಹೂ ಮಾರುಕಟ್ಟೆಯು ಜನರಿಂದ ತುಂಬಿತುಳುಕಿತ್ತು. ಹಬ್ಬದ ಕಾರಣ ನೆರೆಯ ಜಿಲ್ಲೆಗಳ ಜನರೂ ಮಾರುಕಟ್ಟೆಗೆ ಹೂ ಖರೀದಿಗೆ ಬಂದಿದ್ದರು.</p>.<p>ಮಾರುಕಟ್ಟೆಯ ಮುಂಭಾಗದಲ್ಲಿ ಹಣ್ಣು, ಕಾಯಿಯ ವಹಿವಾಟು ಸಹ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>