<p><strong>ಶಿಡ್ಲಘಟ್ಟ</strong>: ತಾಲ್ಲೂಕಿನ ಗಂಗನಹಳ್ಳಿ ಗ್ರಾಮದಲ್ಲಿ ಚೌಡೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ನೂತನ ಶಿಲೆಯ ಪ್ರತಿಷ್ಠಾಪನಾ ಮಹೋತ್ಸವವು ಶುಕ್ರವಾರ ಶ್ರದ್ಧಾಭಕ್ತಿಯಿಂದ ಭಕ್ತರ ಸಮ್ಮುಖದಲ್ಲಿ ನೆರವೇರಿತು. </p>.<p>‘ಐದು ದಿನಗಳಿಂದ ನಾನಾ ಪೂಜೆ ಪುನಸ್ಕಾರ, ಹೋಮ, ಹವನಗಳು ನಡೆದವು. ಪ್ರತಿ ನಿತ್ಯವೂ ಪೂಜೆ, ಮಹಾ ಮಂಗಳಾರತಿ ನೆರವೇರಿಸಲಾಯಿತು. </p>.<p>ಐದನೇ ದಿನವಾದ ಶುಕ್ರವಾರ ನೂತನ ಶಿಲಾ ವಿಗ್ರಹ ಪ್ರತಿಷ್ಠಾಪಿಸುವ ಮೂಲಕ ಜೀರ್ಣೋದ್ಧಾರ ಮತ್ತು ನೂತನ ಶಿಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು. ನೂತನ ವಿಗ್ರಹಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಯಿತು. </p>.<p>ಈ ವೇಳೆ ಗ್ರಾಮದ ವೆಂಕಟೇಶಪ್ಪ ಮಾತನಾಡಿ, ಗಂಗನಹಳ್ಳಿಯ ಪುರಾತನ ಚೌಡೇಶ್ವರಿ ದೇವಾಲಯವನ್ನು ಜೀರ್ಣೋದ್ಧಾರಗೊಳಿಸಿ ಅತ್ಯಂತ ವೈಭವದಿಂದ ಪುನರ್ ಪ್ರತಿಷ್ಠಾಪಿಸಲಾಗಿದೆ. ಸಂಪೂರ್ಣ ಕಲ್ಲಿನ ಕಟ್ಟಡ ಹಾಗೂ ಸುಂದರ ಶಿಖರದ ಈ ದೇವಾಲಯವನ್ನು ಗ್ರಾಮಸ್ಥರೆಲ್ಲರೂ ಸೇರಿ ದಾನಿಗಳ ನೆರವಿನಿಂದ ನಿರ್ಮಿಸಲಾಗಿದೆ. ಜೀರ್ಣೋದ್ಧಾರ ಸಮಿತಿ ಸದಸ್ಯರ ಶ್ರಮದಿಂದ ಈ ಕಾರ್ಯ ಯಶಸ್ವಿಯಾಗಿದೆ ಎಂದರು.</p>.<p><strong>ಯಕ್ಷಗಾನ ಪ್ರದರ್ಶನವೂ ನಡೆಯಿತು.</strong></p>.<p>ವಿ.ಮುನಿಯಪ್ಪ, ಎಂ.ರಾಜಣ್ಣ, ಪುಟ್ಟು ಆಂಜಿನಪ್ಪ, ಸಂಜಯ್ ಗೌಡ, ಮೇಲೂರು ಮಂಜುನಾಥ್, ಬಿ.ಸಿ.ವೆಂಕಟೇಶಪ್ಪ, ಜಿ.ವಿ.ಸುರೇಶ್, ವೆಂಕಟರೆಡ್ಡಿ, ಪ್ರಕಾಶ್, ರಾಜೇಶ್, ಸಂದೀಪ್ ಗೌಡ, ಡಾ.ಮಧುಕರ್, ವಿ.ಚೈತ್ರಾ, ಮುನಿರಾಜು, ಸೊಣ್ಣೇಗೌಡ, ಕೃಷ್ಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ತಾಲ್ಲೂಕಿನ ಗಂಗನಹಳ್ಳಿ ಗ್ರಾಮದಲ್ಲಿ ಚೌಡೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ನೂತನ ಶಿಲೆಯ ಪ್ರತಿಷ್ಠಾಪನಾ ಮಹೋತ್ಸವವು ಶುಕ್ರವಾರ ಶ್ರದ್ಧಾಭಕ್ತಿಯಿಂದ ಭಕ್ತರ ಸಮ್ಮುಖದಲ್ಲಿ ನೆರವೇರಿತು. </p>.<p>‘ಐದು ದಿನಗಳಿಂದ ನಾನಾ ಪೂಜೆ ಪುನಸ್ಕಾರ, ಹೋಮ, ಹವನಗಳು ನಡೆದವು. ಪ್ರತಿ ನಿತ್ಯವೂ ಪೂಜೆ, ಮಹಾ ಮಂಗಳಾರತಿ ನೆರವೇರಿಸಲಾಯಿತು. </p>.<p>ಐದನೇ ದಿನವಾದ ಶುಕ್ರವಾರ ನೂತನ ಶಿಲಾ ವಿಗ್ರಹ ಪ್ರತಿಷ್ಠಾಪಿಸುವ ಮೂಲಕ ಜೀರ್ಣೋದ್ಧಾರ ಮತ್ತು ನೂತನ ಶಿಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು. ನೂತನ ವಿಗ್ರಹಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಯಿತು. </p>.<p>ಈ ವೇಳೆ ಗ್ರಾಮದ ವೆಂಕಟೇಶಪ್ಪ ಮಾತನಾಡಿ, ಗಂಗನಹಳ್ಳಿಯ ಪುರಾತನ ಚೌಡೇಶ್ವರಿ ದೇವಾಲಯವನ್ನು ಜೀರ್ಣೋದ್ಧಾರಗೊಳಿಸಿ ಅತ್ಯಂತ ವೈಭವದಿಂದ ಪುನರ್ ಪ್ರತಿಷ್ಠಾಪಿಸಲಾಗಿದೆ. ಸಂಪೂರ್ಣ ಕಲ್ಲಿನ ಕಟ್ಟಡ ಹಾಗೂ ಸುಂದರ ಶಿಖರದ ಈ ದೇವಾಲಯವನ್ನು ಗ್ರಾಮಸ್ಥರೆಲ್ಲರೂ ಸೇರಿ ದಾನಿಗಳ ನೆರವಿನಿಂದ ನಿರ್ಮಿಸಲಾಗಿದೆ. ಜೀರ್ಣೋದ್ಧಾರ ಸಮಿತಿ ಸದಸ್ಯರ ಶ್ರಮದಿಂದ ಈ ಕಾರ್ಯ ಯಶಸ್ವಿಯಾಗಿದೆ ಎಂದರು.</p>.<p><strong>ಯಕ್ಷಗಾನ ಪ್ರದರ್ಶನವೂ ನಡೆಯಿತು.</strong></p>.<p>ವಿ.ಮುನಿಯಪ್ಪ, ಎಂ.ರಾಜಣ್ಣ, ಪುಟ್ಟು ಆಂಜಿನಪ್ಪ, ಸಂಜಯ್ ಗೌಡ, ಮೇಲೂರು ಮಂಜುನಾಥ್, ಬಿ.ಸಿ.ವೆಂಕಟೇಶಪ್ಪ, ಜಿ.ವಿ.ಸುರೇಶ್, ವೆಂಕಟರೆಡ್ಡಿ, ಪ್ರಕಾಶ್, ರಾಜೇಶ್, ಸಂದೀಪ್ ಗೌಡ, ಡಾ.ಮಧುಕರ್, ವಿ.ಚೈತ್ರಾ, ಮುನಿರಾಜು, ಸೊಣ್ಣೇಗೌಡ, ಕೃಷ್ಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>