<p><strong>ಗೌರಿಬಿದನೂರು:</strong> ಇಲ್ಲಿನ ಕೆಎಸ್ಆರ್ಟಿಸಿ ಬಸ್ ಡಿಪೊ ಮುಂಭಾಗದಲ್ಲಿರುವ ಸೋಫಾಸೆಟ್ ಮಳಿಗೆಗೆ ಗುರುವಾರ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೋಫಾ ಸೆಟ್ಗಳು ಆಹುತಿಯಾಗಿವೆ. </p>.<p>ಅಂಗಡಿಯಲ್ಲಿರುವ ನಿರುಪಯುಕ್ತ ವಸ್ತುಗಳನ್ನು ಸುಡುವಾಗ ಬೆಂಕಿಯು ಅಂಗಡಿಯಲ್ಲಿದ್ದ ವಸ್ತುಗಳಿಗೆ ತಗುಲಿದೆ. ಈ ಮಳಿಗೆಯು ನಗರಸಭೆಯಿಂದ ಪರವಾನಗಿ ಪಡೆದಿರಲಿಲ್ಲ. ಪರವಾನಗಿ ಪಡೆದಿದ್ದರೆ, ಸಾಲ ಅಥವಾ ಸರ್ಕಾರದಿಂದ ಅನುಕೂಲ ಪಡೆಯಬಹುದಿತ್ತು. ನಗರದಲ್ಲಿರುವ ಅಂಗಡಿ ಮಾಲೀಕರು ತಪ್ಪದೆ ಪರವಾನಗಿ ಪಡೆದುಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತ ಕೆ.ಜಿ. ರಮೇಶ್ ತಿಳಿಸಿದರು. .</p>.<p>ಮಾಲೀಕ ಶೌಕತ್ ಖಾನ್ ಮಾತನಾಡಿ, ಅಂಗಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರು ನಿರುಪಯುಕ್ತ ವಸ್ತುಗಳನ್ನು ಮಳಿಗೆ ಹೊರಗೆ ಸುಡುತ್ತಿದ್ದರು. ಈ ಬೆಂಕಿ ಅಂಗಡಿಗೆ ವ್ಯಾಪಿಸಿದ್ದು, ಅಂಗಡಿಯಲ್ಲಿದ್ದ ₹80 ಲಕ್ಷ ಬೆಲೆ ಬಾಳುವ ಸೋಫಾಗಳು ಮತ್ತು ಒಂದು ಹೊಸ ಬುಲೆಟ್ ಆಹುತಿಯಾಗಿದೆ ಎಂದು ಅಳಲು ತೋಡಿಕೊಂಡರು.</p>.<p>ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ಇಲ್ಲಿನ ಕೆಎಸ್ಆರ್ಟಿಸಿ ಬಸ್ ಡಿಪೊ ಮುಂಭಾಗದಲ್ಲಿರುವ ಸೋಫಾಸೆಟ್ ಮಳಿಗೆಗೆ ಗುರುವಾರ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೋಫಾ ಸೆಟ್ಗಳು ಆಹುತಿಯಾಗಿವೆ. </p>.<p>ಅಂಗಡಿಯಲ್ಲಿರುವ ನಿರುಪಯುಕ್ತ ವಸ್ತುಗಳನ್ನು ಸುಡುವಾಗ ಬೆಂಕಿಯು ಅಂಗಡಿಯಲ್ಲಿದ್ದ ವಸ್ತುಗಳಿಗೆ ತಗುಲಿದೆ. ಈ ಮಳಿಗೆಯು ನಗರಸಭೆಯಿಂದ ಪರವಾನಗಿ ಪಡೆದಿರಲಿಲ್ಲ. ಪರವಾನಗಿ ಪಡೆದಿದ್ದರೆ, ಸಾಲ ಅಥವಾ ಸರ್ಕಾರದಿಂದ ಅನುಕೂಲ ಪಡೆಯಬಹುದಿತ್ತು. ನಗರದಲ್ಲಿರುವ ಅಂಗಡಿ ಮಾಲೀಕರು ತಪ್ಪದೆ ಪರವಾನಗಿ ಪಡೆದುಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತ ಕೆ.ಜಿ. ರಮೇಶ್ ತಿಳಿಸಿದರು. .</p>.<p>ಮಾಲೀಕ ಶೌಕತ್ ಖಾನ್ ಮಾತನಾಡಿ, ಅಂಗಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರು ನಿರುಪಯುಕ್ತ ವಸ್ತುಗಳನ್ನು ಮಳಿಗೆ ಹೊರಗೆ ಸುಡುತ್ತಿದ್ದರು. ಈ ಬೆಂಕಿ ಅಂಗಡಿಗೆ ವ್ಯಾಪಿಸಿದ್ದು, ಅಂಗಡಿಯಲ್ಲಿದ್ದ ₹80 ಲಕ್ಷ ಬೆಲೆ ಬಾಳುವ ಸೋಫಾಗಳು ಮತ್ತು ಒಂದು ಹೊಸ ಬುಲೆಟ್ ಆಹುತಿಯಾಗಿದೆ ಎಂದು ಅಳಲು ತೋಡಿಕೊಂಡರು.</p>.<p>ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>